Satya Darshana
ಬಿಸಿ ಬಿಸಿ ಸುದ್ದಿ
ದೇಶ-ವಿದೇಶಬಿಸಿ ಬಿಸಿ ಸುದ್ದಿ

ಉತ್ತರ ಪ್ರದೇಶದ ಮಾಜಿ ಸಿಎಂ, ಹಿರಿಯ ಬಿಜೆಪಿ ನಾಯಕ ಕಲ್ಯಾಣ್ ಸಿಂಗ್ ನಿಧನ

1991, ಜೂನ್ ತಿಂಗಳಿಂದ 1992 ಡಿಸೆಂಬರ್​ವರೆಗೆ ಮತ್ತು 1997 ಸೆಪ್ಟೆಂಬರ್​ನಿಂದ 1999 ನವೆಂಬರ್​ವರೆಗೆ ಅವರು ಎರಡು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ರಾಜಸ್ಥಾನದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಅವರ ಮೊದಲ ಅಧಿಕಾರಾವಧಿಯಲ್ಲಿ ಅಯೋಧ್ಯಾದ ಬಾಬ್ರೀ ಮಸೀದಿಯನ್ನು ಕರ ಸೇವಕರು ನಾಶಪಡಿಸಿದ ಘಟನೆಯೂ ನಡೆದಿತ್ತು. ಬಾಬ್ರೀ ಮಸೀದಿ ಧ್ವಂಸಗೊಂಡ ದಿನವೇ ಕಲ್ಯಾಣ್ ಸಿಂಗ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿದ್ದರು. ಈ ಕಾರಣದಿಂದಲೇ ಕಲ್ಯಾಣ್ ಸಿಂಗ್​ರನ್ನು ಇಂದಿಗೂ ಹಲವರು ನೆನಪಿಸಿಕೊಳ್ಳುತ್ತಾರೆ.ಕಲ್ಯಾಣ್ ಸಿಂಗ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಹಲವು ಬಿಜೆಪಿ ನಾಯಕರು ಕಲ್ಯಾಣ್ ಸಿಂಗ್ ಅವರ ಅಂತಿಮ ದರ್ಶನಕ್ಕೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ನರೇಂದ್ರ ಮೋದಿ, ಮಾಯಾವತಿ, ಅಖಿಲೇಶ್ ಯಾದವ್ ಮತ್ತು ಹಲವು ಗಣ್ಯರು ಕಲ್ಯಾಣ್ ಸಿಂಗ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಉತ್ತರ ಪ್ರದೇಶದಲ್ಲಿ ಮೂರು ದಿನ ಶೋಕಾಚರಣೆಗೆ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಆದೇಶಿಸಿದ್ದಾರೆ.

Related posts

ಕರ್ನಾಟಕ ರಾಜ್ಯ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದಿಂದ ಕೊಡಮಾಡುವ 20.22ನೇ ಸಾಲಿನ ಬಿ ಕೆ ಮಾದಿ ಪತ್ರಕರ್ತರತ್ನ ಪ್ರಶಸ್ತಿಗೆ ಆಯ್ಕೆ

satyadarshana

ಡಿ.ದೇವರಾಜ ಅರಸು ಭವನ ಹಾಗೂ ಮೆಟ್ರಿಕ್ ನಂತರ ಬಾಲಕರ ವಿದ್ಯಾರ್ಥಿನಿಲಯ ಕಟ್ಟಡ ಲೋಕಾರ್ಪಣೆ

satyadarshana

ಪಾಲಿಟೆಕ್ನಿಕ್ ಅತಿಥಿ ಉಪನ್ಯಾಸಕರ ಆಶಾಕಿರಣ ಎಸ್ ,ವಿ,ಸಂಕನೂರ್

satyadarshana

Leave a Comment