ಸುದ್ದಿಮೂಲ ಮುಂಡರಗಿ
ನಡೆದುಕೊಂಡೇ ಶಾಲೆಗೆ ಹೋಗಬೇಕಾಗಿದೆ.
ಲಾಕ್ಡೌನ್ ಸಮಯದಲ್ಲಿ ಗದುಗಿನಿಂದ ಎಕ್ಲಾಸಪುರ ಗ್ರಾಮಕ್ಕೆ ಬರುತ್ತಿದ್ದ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಯಿತು. ಈಗ ಬಸ್ ಸಂಚಾರವನ್ನು ಮರಳಿ ಪ್ರಾರಂಭಿಸಿಲ್ಲ. ಎಕ್ಲಾಪುರ ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಅಕ್ಕಪಕ್ಕದ ಹೈತಾಪುರ, ವೆಂಕಟಾಪುರ ಹಾಗೂ ಮತ್ತಿತರ ಗ್ರಾಮಗಳ ವಿದ್ಯಾರ್ಥಿಗಳು ಎಕ್ಲಾಸಪುರ ಶಾಲೆಗೆ ಬರುತ್ತಿದ್ದಾರೆ.
ಸರ್ಕಾರ ಇದೀಗ 9ನೇ ತರಗತಿಯಿಂದ ಶಾಲೆಗಳನ್ನು ಪ್ರಾರಂಭಿಸಿದ್ದು, ತರಗತಿಗಳು ಪ್ರಾರಂಭವಾಗಿವೆ. ಗದುಗಿನಿಂದ ಬಸ್ ಬಾರದೆ ಇರುವುದರಿಂದ ಅವರೆಲ್ಲ ಸುಮಾರು 10 ಕಿ.ಮೀ. ನಡೆದುಕೊಂಡು ಶಾಲೆಗೆ ಬರಬೇಕಾಗಿದೆ. ಮುಂಡರಗಿಯಿಂದ ಹಲವು ಬಸ್ಸುಗಳು ಬರುತ್ತಿವೆ. ಆದರೆ ಅವು ಶಾಲಾ ಸಮಯಕ್ಕೆ ಬರುವುದಿಲ್ಲ.
‘ಸಮಯಕ್ಕೆ ಸರಿಯಾಗಿ ಬಸ್ ಸಂಚಾರವಿಲ್ಲದ್ದರಿಂದ ಕೆಲವು ಗ್ರಾಮಗಳ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ತಕ್ಷಣ ಗದುಗಿನಿಂದ ಎಕ್ಲಾಸಪುರ ಗ್ರಾಮಕ್ಕೆ ಮೊದಲಿನಂತೆ ಬಸ್ ಸಂಚಾರವನ್ನು ಪ್ರಾರಂಭಿಸಬೇಕು’ ಎನ್ನುತ್ತಾರೆ ಆ ಗ್ರಾಮದ ಯುವ ಮುಖಂಡ ಮಹಾಂತೇಶ ಮುಗುಳಿ.
*
ಸಕಾಲದಲ್ಲಿ ಶಾಲೆಗೆ ತೆರಳಲು ಬಸ್ ಇಲ್ಲದ್ದರಿಂದ ನಿತ್ಯ ಸುಮಾರು 4 ಕಿ.ಮೀ. ನಡೆದು ಶಾಲೆಗೆ ಹೋಗಬೇಕಿದೆ. ಅರ್ಧ ಸಮಯವನ್ನು ರಸ್ತೆಯಲ್ಲಿಯೇ ಕಳೆಯುವಂತಾಗಿದೆ.
-ಸುದೀಪ ಹಲವಾಗಲಿ, ಹೈತಾಪುರ ಗ್ರಾಮದ ವಿದ್ಯಾರ್ಥಿ
**
ನಿಗದಿಯಂತೆ ಎಕ್ಲಾಸಪುರ ಗ್ರಾಮಕ್ಕೆ ಮುಂಜಾನೆ ಎರಡು ಬಸ್ಸುಗಳನ್ನು ಬಿಡಲಾಗುತ್ತದೆ. ಮೇಲಧಿಕಾರಿಗಳೊಂದಿಗೆ ಚರ್ಚಿಸಿ ಹೆಚ್ಚುವರಿ ಬಸ್ ಓಡಿಸಲು ಕ್ರಮ ಕೈಗೊಳ್ಳಲಾಗುವುದು
- -ಎಸ್.ಡಿ.ಬಳೂಟಗಿ, ಘಟಕ ವ್ಯವಸ್ಥಾಪಕ, ಮುಂಡರಗಿ
