ಸುದ್ದಿಮೂಲ ಸತ್ಯದರ್ಶನ
ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವು ವಿಚಾರಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ, ಮತ್ತು ಬಿಬಿಎಂಪಿಗೆ ಸದ್ಯಕ್ಕೆ ರಿಲೀಫ್ ಸಿಕ್ಕಿದ್ದು ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 4ಕ್ಕೆ ಮುಂದೂಡಿದೆ.
ಸ್ವಯಂಪ್ರೇರಿತ ಪಿಐಎಲ್ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ಗೆ ಬಿಬಿಎಂಪಿ ಅನಧಿಕೃತ ಧಾರ್ಮಿಕ ಕೇಂದ್ರಗಳ ತೆರವಿಗೆ ಕೈಗೊಂಡ ಕ್ರಮ ತಿಳಿಸಬೇಕಿತ್ತು. ಜೊತೆಗೆ ತೆರವಿಗೆ ಕಾಲಮಿತಿ ನಿಗದಿಪಡಿಸಿ ಪ್ರಮಾಣ ಪತ್ರ ಸಲ್ಲಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಹೈಕೋರ್ಟ್ ಸೂಚಿಸಿತ್ತು. ಈ ಬಗ್ಗೆ ಮಾಹಿತಿ ನೀಡಬೇಕಿದ್ದ ರಾಜ್ಯ ಸರ್ಕಾರ ವಾದಮಂಡನೆಗೆ ಕಾಲಾವಕಾಶ ಕೋರಿದೆ. ಆದ್ದರಿಂದ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 4 ಕ್ಕೆ ಮುಂದೂಡಿದೆ.
