Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ಹಾನಗಲ್‌ ಸಿಂದಗಿ ಉಪಚುನಾವಣೆ ಮತ ಎಣಿಕೆ: ಯಾರಿಗೆ ದೀಪಾವಳಿ ಬೆಳಕು?

ಸತ್ಯದರ್ಶನ

ಹಾವೇರಿ./ಬಾಗಲಕೋಟೆ: ಭಾರಿ ಕುತೂಹಲ ಕೆರಳಿಸಿರುವ ಹಾನಗಲ್‌ ಮತ್ತು ಸಿಂದಗಿ ಕ್ಷೇತ್ರಗಳ ಉಪಸಮರದ ಮತ ಎಣಿಕೆ ಮಂಗಳವಾರ ನಡೆಯಲಿದ್ದು, ಮಧ್ಯಾಹ್ನದ ಹೊತ್ತಿಗೆ ಫಲಿತಾಂಶ ನಿರೀಕ್ಷಿಸಲಾಗಿದೆ. ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ನಡುವೆ ಜಿದ್ದಾಜಿದ್ದಿನ ಫೈಟ್‌ ನಡೆಯುವ ನಿರೀಕ್ಷೆ ಇರುವುದರಿಂದ, ಎರಡೂ ಪಕ್ಷಗಳಲ್ಲಿ ಭಾರಿ ಲೆಕ್ಕಾಚಾರ ನಡೆಯುತ್ತಿದೆ.

ಹಾನಗಲ್‌ ಕ್ಷೇತ್ರದ ಮತಗಳ ಎಣಿಕೆ ಮಂಗಳವಾರ ಬೆಳಗ್ಗೆ 8ರಿಂದ ದೇವಗಿರಿಯ ಸರಕಾರಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಆರಂಭಗೊಳ್ಳಲಿದೆ. ಬೆಳಗ್ಗೆ 7.30 ಕ್ಕೆ ಸ್ಟ್ರಾಂಗ್‌ ರೂಂ ತೆರೆಯಲಾಗುವುದು. 7.45ಕ್ಕೆ ಅಭ್ಯರ್ಥಿಗಳ ಸಮ್ಮುಖದಲ್ಲೇ ಅಂಚೆ ಮತಗಳ ಎಣಿಕೆ ಕಾರ್ಯ ನಡೆಸಿ 8 ಗಂಟೆಗೆ ವಿದ್ಯುನ್ಮಾನ ಮತಯಂತ್ರಗಳ ಮತ ಎಣಿಕೆ ಆರಂಭಿಸಲಾಗುವುದು. ಅಂಚೆ ಮತದಾನ ಎಣಿಕೆಗೆ ಒಂದು ಕೊಠಡಿ ಹಾಗೂ ವಿದ್ಯುನ್ಮಾನ ಮತ ಯಂತ್ರಗಳಲ್ಲಿನ ಮತ ಎಣಿಕೆಗೆ ಎರಡು ಕೊಠಡಿಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಕೊಠಡಿಯಲ್ಲಿ ತಲಾ ಏಳು ಎಣಿಕೆ ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಇವಿ ಸ್ಲಿಪ್‌ ಎಣಿಕೆ

ಇ.ವಿ.ಎಂ ಮತ ಯಂತ್ರಗಳ ಎಣಿಕೆ ಮುಕ್ತಾಯದ ನಂತರ ಐದು ವಿ.ವಿ. ಪ್ಯಾಟ್‌ ಮತ ಯಂತ್ರಗಳಲ್ಲಿನ ವಿ.ವಿ. ಪ್ಯಾಟ್‌ ಸ್ಲಿಪ್‌ಗಳನ್ನು ಎಣಿಕೆ ಮಾಡಲಾಗುವುದು. ಹಾಗಾಗಿ ಫಲಿತಾಂಶ ಪ್ರಕಟಣೆ ವಿಳಂಬವಾಗಲಿದೆ ಎಂದು ತಿಳಿಸಿದರು

 

ಪ್ರಧಾನ ಹುರಿಯಾಳುಗಳು

ಬಿಜೆಪಿ: ಅಭ್ಯರ್ಥಿ ಶಿವರಾಜ ಸಜ್ಜನರ

ಕಾಂಗ್ರೆಸ್‌: ಶ್ರೀನಿವಾಸ ಮಾನೆ

ಜೆಡಿಎಸ್‌: ನಿಯಾಜ್‌ ಶೇಖ್‌

ಮತ್ತು ಕೆಲವು ಪಕ್ಷೇತರರು

ಸಿಂದಗಿ ಕ್ಷೇತ್ರ ಪ್ರಮುಖ ಅಭ್ಯರ್ಥಿಗಳು

ಬಿಜೆಪಿ: ರಮೇಶ ಭೂಸನೂರ

ಕಾಂಗ್ರೆಸ್‌: ಅಶೋಕ್‌ ಮನಗೂಳಿ

ಜೆಡಿಎಸ್‌: ನಾಜಿಯಾ ಅಂಗಡಿ

 

ಸೈನಿಕ ಶಾಲೆಯಲ್ಲಿ ಮತ ಎಣಿಕೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತ ಎಣಿಕೆ ಕೊಠಡಿಗಳು 2, ಪ್ರತಿ ಕೊಠಡಿಯಲ್ಲಿ ತಲಾ 7 ಟೇಬಲ್‌ನಂತೆ ಒಟ್ಟು 14 ಟೇಬಲ್‌ಗಳು, ಪ್ರತಿ ಟೇಬಲ್‌ಗೆ ತಲಾ ಒಬ್ಬ ಮೈಕ್ರೋ ಅಬ್ಸರ್ವರ್‌ ಒಬ್ಬ ಮತ ಎಣಿಕೆ ಮೇಲ್ವಿಚಾರಕ, ಒಬ್ಬ ಮತ ಎಣಿಕೆ ಸಹಾಯಕರು ಹೀಗೆ ಒಟ್ಟು 60 ಸಿಬ್ಬಂದಿ ನಿಯೋಜಿಸಲಾಗಿದೆ. ಮತ ಎಣಿಕೆ ಕಾರ್ಯ 22 ಸುತ್ತುಗಳಲ್ಲಿ ನಡೆಯಲಿದೆ. ಅಂಚೆ ಮತಪತ್ರಗಳ ಎಣಿಕೆ ಕಾರ್ಯ ಚುನಾವಣಾಧಿಕಾರಿಗಳ ಸಮಕ್ಷಮ ನಡೆಯಲಿದೆ.

ಇವಿಎಂಗಳ ಎಣಿಕೆ ಕೊನೆಯ ಸುತ್ತಿನ ನಂತರ 5 ವಿವಿಪ್ಯಾಟ್‌ ಮತಯಂತ್ರಗಳಲ್ಲಿನ ವಿವಿ ಪ್ಯಾಟ್‌ ಸ್ಲಿಪ್‌ಗಳನ್ನು ಎಣಿಕೆ ಮಾಡಲಾಗುತ್ತದೆ. ಚುನಾವಣಾ ನಿಯೋಜಿತ ನಿಗದಿತ ಅಧಿಕಾರಿಗಳ ಪ್ರವೇಶ ಅನುಮತಿ ಹೊಂದಿದ ವಾಹನಗಳಿಗೆ ಮಾತ್ರ ವಾಹನ ನಿಲುಗಡೆ ಪ್ರದೇಶದವರೆಗೆ ಮಾತ್ರ ಅವಕಾಶವಿರುತ್ತದೆ.

ಹೊರಗೆ, ಒಳಗೂ ಭದ್ರತೆ

3 ಪಾಳಿಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳನ್ನು ಮತ ಎಣಿಕೆ ಕೇಂದ್ರಕ್ಕೆ ನಿಯೋಜಿಸಲಾಗಿದೆ. ಮತ ಎಣಿಕೆ ಕೇಂದ್ರ ಒಳಗೆ ಮತ್ತು ಹೊರಗೆ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಗೆ 4 ಡಿವೈಎಸ್ಪಿ, 5 ಸಿಪಿಐ, 23 ಪಿಎಸ್‌ಐ. 25 ಎಸ್‌ಐ, 282 ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರ

Related posts

ಸಿಂಗಟಾಲೂರು ಏತ ನೀರಾವರಿ ಯೋಜನೆ ಹಿನ್ನೀರಿಗೆ ಭೂಮಿ ಕಳೆದುಕೊಂಡ ರೈತರ ಪ್ರತಿಭಟನೆ

satyadarshana

ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ನಿವಾಸಕ್ಕೆ ಮುತ್ತಿಗೆ ಹಾಕಿ.ಭಾರಿ ಹಣ ವಶಕ್ಕೆ ಪಡೆದ ಪ್ರತಿಭಟನಾಕಾರರು

satyadarshana

ನರೇಗಾ ಯೋಜನೆಯ ಕಾಮಗಾರಿಗಳ ಪರಿಶೀಲಿಸಿದ ರಾಜ್ಯ ತಂಡ* ರೋಣ ತಾಲೂಕಿನ ಅಬ್ಬಿಗೇರಿ ಹಾಗೂ ಸವಡಿ ಗ್ರಾಪಂ ಗಳಿಗೆ ಭೇಟಿ

satyadarshana

Leave a Comment