Satya Darshana
ಬಿಸಿ ಬಿಸಿ ಸುದ್ದಿ
ದೇಶ-ವಿದೇಶ

ರಷ್ಯಾ ದಾಳಿಯಿಂದ ರಕ್ಷಿಸಿಕೊಳ್ಳಲು ಭೂಗತ ಹ್ಯಾಕರ್‌ಗೆ ಉಕ್ರೇನ್ ಕರೆ!

ವಾಷಿಂಗ್ಟನ್:  ರಷ್ಯಾ ದಾಳಿಯಿಂದ ಮೂಲಸೌಕರ್ಯ ರಕ್ಷಿಸಿಕೊಳ್ಳಲು, ರಷ್ಯಾ ಸೈನ್ಯದ ವಿರುದ್ಧ ಸೈಬರ್ ಬೇಹುಗಾರಿಕೆ ಕಾರ್ಯಾಚರಣೆಗಳನ್ನು ನಡೆಸಲು ಉಕ್ರೇನ್ ಸರ್ಕಾರವು ದೇಶದ ಭೂಗತ ಹ್ಯಾಕರ್‌ಗಳಿಂದ ಸ್ವಯಂಸೇವಕರನ್ನು ಕೇಳುತ್ತಿದೆ

ರಷ್ಯಾದ ಪಡೆಗಳು ಉಕ್ರೇನ್ ನಗರಗಳ ಮೇಲೆ ದಾಳಿ ಮಾಡುತ್ತಿದ್ದಂತೆ, ಸ್ವಯಂಸೇವಕರಿಗೆ ನಿನ್ನೆ ಹ್ಯಾಕರ್ ಫೋರಮ್‍ಗಳಲ್ಲಿ ಕಾಣಿಸಿಕೊಳ್ಳಲು ಗೂಗಲ್ ಮೂಲಕ ತಿಳಿಸಲಾಗಿದೆ. ದಾಳಿ ಹಿನ್ನೆಲೆ ಅನೇಕ ನಿವಾಸಿಗಳು ರಾಜಧಾನಿ ಕೀವ್ ಬಿಟ್ಟು ಬೇರೆ ಕಡೆ ಹೋಗುತ್ತಿದ್ದಾರೆ.

ಉಕ್ರೇನಿಯನ್ ಸೈಬರ್ ಸಮುದಾಯ, ನಮ್ಮ ದೇಶದ ರಕ್ಷಣೆಯಲ್ಲಿ ತೊಡಗಿಸಿಕೊಳ್ಳಲು ಸಮಯವಾಗಿದೆ ಎಂದು ಉಕ್ರೇನ್ ಪೋಸ್ಟ್ ಮಾಡಿದೆ. ಹ್ಯಾಕರ್‍ಗಳು ಮತ್ತು ಸೈಬರ್ ಸೆಕ್ಯುರಿಟಿ ಪರಿಣಿತರನ್ನು ಗೂಗಲ್ ಡಾಕ್ಸ್ ಮೂಲಕ ಅಪ್ಲಿಕೇಶನ್ ಸಲ್ಲಿಸಲು ಕೇಳಿದೆ.

ಕೀವ್‍ನಲ್ಲಿರುವ ಸೈಬರ್ ಸೆಕ್ಯುರಿಟಿ ಕಂಪನಿಯ ಸಹ-ಸಂಸ್ಥಾಪಕ ಯೆಗೊರ್ ಔಶೇವ್ ಅವರನ್ನು ನಿನ್ನೆ ರಕ್ಷಣಾ ಸಚಿವಾಲಯದ ಹಿರಿಯ ಅಧಿಕಾರಿಗಳು ಸಂಪರ್ಕಿಸಿದ್ದಾರೆ. ಈ ವೇಳೆ ಅವರು ಸೈಬರ್ ರಕ್ಷಣೆ ಬಗ್ಗೆ ಪೋಸ್ಟ್ ಮಾಡುವಂತೆ ಕೋರಿಕೊಂಡಿದ್ದು, ಇದನ್ನು ಬರೆದಿದ್ದಾರೆ ಎಂದು ರಾಯಿಟರ್ಸ್‍ಗೆ ತಿಳಿಸಿದರು

Related posts

ಸತ್ಯದರ್ಶನ ಕನ್ನಡ ದಿನಪತ್ರಿಕೆ.26.04.2023

satyadarshana

ಚರ್ಚೆ: ಅಖಂಡ ಕರ್ನಾಟಕದ ಅನಿವಾರ್ಯ, ಉತ್ತರ ಕರ್ನಾಟಕ ಪ್ರತ್ಯೇಕತೆ ಕೂಗು

cradmin

ಡಿಬೇಟ್ : ಎಲ್ಲದಕ್ಕೂ ಕುಮಾರಸ್ವಾಮಿ ಹೈಕಮಾಂಡ್ ಒಪ್ಪಿಗೆ ಪಡೆಯಬೇಕಾ?

cradmin

Leave a Comment