Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ಜನತಾ ಜಲಧಾರೆಯ ಗಂಗಾ ರಥಗಳಿಗೆ ಹಸಿರು ನಿಶಾನೆ

ರಾಮನಗರ, ಏ.13- ಜೆಡಿಎಸ್ ಪಕ್ಷದ ಮಹತ್ವದ ಜನತಾ ಜಲಧಾರೆ ಕಾರ್ಯಕ್ರಮದ 15 ಗಂಗಾ ರಥಗಳಿಗೆ ಮಾಜಿ ಪ್ರಧಾನಿ ಹೆಚ್. ಡಿ.ದೇವೇಗೌಡರು ಹಸಿರು ನಿಶಾನೆ ತೋರಿದರು. ರಾಮನಗರದ ಗ್ರಾಮ ದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಈ ಗಂಗಾ ರಥಗಳಿಗೆ ಚಾಲನೆ ನೀಡಿದರು.

ಜನತಾ ಜಲಧಾರೆಯ 15 ರಥಗಳಿಗೆ ಕಳಸ ಪ್ರತಿಷ್ಠಾಪನೆ ಮಾಡಿ, ನೀರಾವರಿ ಯೋಜನೆಯ ವಿವರವನ್ನು ರಥಗಳ ಮೇಲೆ ಪ್ರದರ್ಶಿಸಲಾಗಿದೆ. ರಾಜ್ಯದ 31 ಜಿಲ್ಲಾಗಳ 94 ಸ್ಥಳಗಳಲ್ಲಿ ಇರುವ ಪ್ರಮುಖ ನದಿ ಹಾಗೂ ಉಪ ನದಿಗಳಲ್ಲಿ ನೀರನ್ನು ಈ ರಥಗಳ ಮೂಲಕ ಸಂಗ್ರಹಿಸಲಾಗುತ್ತದೆ

ಎಲ್ಲಾ ರಥಗಳು ಮೇ 8 ರೊಳಗೆ ಬೆಂಗಳೂರಿಗೆ ತಲುಪಲಿವೆ. ಬೆಂಗಳೂರಿನ ಪಕ್ಷದ ಕಚೇರಿ ಜೆಪಿ ಭವನದ ಬಳಿ ಬೃಹತ್ ಕಳಸ ಸ್ಥಾಪನೆ ಮಾಡಿ ಅಲ್ಲಿ ಎಲ್ಲಾ ಜಿಲ್ಲಾಗಳಿಂದ ತರುವ ನೀರನ್ನು ಇಟ್ಟು ಮುಂದಿನ ಚುನಾವಣೆವರೆಗೂ ಪೂಜೆ ಸಲ್ಲಿಸಲಾಗುತ್ತದೆ. ರಾಜ್ಯದ 180 ತಾಲೂಕುಗಳಲ್ಲಿ ಈ ರಥಗಳು ಪ್ರವಾಸ ಮಾಡಲಿವೆ.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಬಂಡೆಪ್ಪ ಖಾಶೆಂಪೂರ್, ಸಿ.ಎಂ.ಇಬ್ರಾಹಿಂ, ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಶಾಸಕ ಮಂಜುನಾಥ್, ವಿಧಾನ ಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ ಸೇರಿದಂತೆ ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Related posts

ಫೆ.14 ರಿಂದ ಯಲಬುರ್ಗಾ ತಾಲೂಕಿನಲ್ಲಿ ವಾರ್ತಾ ಇಲಾಖೆಯಿಂದ ಬೀದಿ ನಾಟಕ ಕಾರ್ಯಕ್ರಮಗಳ ಪ್ರದರ್ಶನ

satyadarshana

ಪುನೀತ್ ಗೆ ಪದ್ಮಶ್ರೀ ನೀಡುವಂತೆ ರಾಜ್ಯ ಸರ್ಕಾರ ಒತ್ತಾಯ.

satyadarshana

ಉದ್ಯಮಶೀಲತಾಭಿವೃದ್ಧಿ ಪ್ರೇರಣಾ ತರಬೇತಿ ಕಾರ್ಯಕ್ರಮ ಉದ್ಘಾಟನೆ » ಪ್ರಶಾಂತ ವರಗಪ್ಪನವರ

satyadarshana

Leave a Comment