ರಾಮನಗರ, ಏ.13- ಜೆಡಿಎಸ್ ಪಕ್ಷದ ಮಹತ್ವದ ಜನತಾ ಜಲಧಾರೆ ಕಾರ್ಯಕ್ರಮದ 15 ಗಂಗಾ ರಥಗಳಿಗೆ ಮಾಜಿ ಪ್ರಧಾನಿ ಹೆಚ್. ಡಿ.ದೇವೇಗೌಡರು ಹಸಿರು ನಿಶಾನೆ ತೋರಿದರು. ರಾಮನಗರದ ಗ್ರಾಮ ದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಈ ಗಂಗಾ ರಥಗಳಿಗೆ ಚಾಲನೆ ನೀಡಿದರು.
ಜನತಾ ಜಲಧಾರೆಯ 15 ರಥಗಳಿಗೆ ಕಳಸ ಪ್ರತಿಷ್ಠಾಪನೆ ಮಾಡಿ, ನೀರಾವರಿ ಯೋಜನೆಯ ವಿವರವನ್ನು ರಥಗಳ ಮೇಲೆ ಪ್ರದರ್ಶಿಸಲಾಗಿದೆ. ರಾಜ್ಯದ 31 ಜಿಲ್ಲಾಗಳ 94 ಸ್ಥಳಗಳಲ್ಲಿ ಇರುವ ಪ್ರಮುಖ ನದಿ ಹಾಗೂ ಉಪ ನದಿಗಳಲ್ಲಿ ನೀರನ್ನು ಈ ರಥಗಳ ಮೂಲಕ ಸಂಗ್ರಹಿಸಲಾಗುತ್ತದೆ
ಎಲ್ಲಾ ರಥಗಳು ಮೇ 8 ರೊಳಗೆ ಬೆಂಗಳೂರಿಗೆ ತಲುಪಲಿವೆ. ಬೆಂಗಳೂರಿನ ಪಕ್ಷದ ಕಚೇರಿ ಜೆಪಿ ಭವನದ ಬಳಿ ಬೃಹತ್ ಕಳಸ ಸ್ಥಾಪನೆ ಮಾಡಿ ಅಲ್ಲಿ ಎಲ್ಲಾ ಜಿಲ್ಲಾಗಳಿಂದ ತರುವ ನೀರನ್ನು ಇಟ್ಟು ಮುಂದಿನ ಚುನಾವಣೆವರೆಗೂ ಪೂಜೆ ಸಲ್ಲಿಸಲಾಗುತ್ತದೆ. ರಾಜ್ಯದ 180 ತಾಲೂಕುಗಳಲ್ಲಿ ಈ ರಥಗಳು ಪ್ರವಾಸ ಮಾಡಲಿವೆ.
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಬಂಡೆಪ್ಪ ಖಾಶೆಂಪೂರ್, ಸಿ.ಎಂ.ಇಬ್ರಾಹಿಂ, ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಶಾಸಕ ಮಂಜುನಾಥ್, ವಿಧಾನ ಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ ಸೇರಿದಂತೆ ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
