Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ಮುರುಘಾ ಶ್ರೀಗಳದ್ದು ಮಾತಿಲ್ಲ, ಕಥೆಯಿಲ್ಲ, ಬರಿ ಮೌನ!ವಿಚಾರಣೆ ವೇಳೆ.

 

ಚಿತ್ರದುರ್ಗ:  ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಮುರುಘಾ ಶರಣರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಪೊಲೀಸರ ಪ್ರಶ್ನೆಗಳಿಗೆ ಮುರುಘಾ ಶರಣರು ತುಟಿ ಬಿಚ್ಚುತ್ತಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಮುರುಘಾ ಶರಣರು ಪೊಲೀಸರ ಪ್ರಶ್ನೆಗಳಿಗೆ ಉತ್ತರಿಸುವ ಬದಲು ಮೌನಕ್ಕೆ ಶರಣಾಗಿದ್ದಾರೆ. ಇದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ ಎನ್ನಲಾಗಿದೆ. ಸದ್ಯ ಶಿವಾಚಾರ್ಯರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿದೆ. ನ್ಯಾಯಾಲಯ ನಾಲ್ಕು ದಿನಗಳ ಕಾಲ ವಿಚಾರಣೆಗಾಗಿ ಶರಣರನ್ನು ಪೊಲೀಸ್‌ ಕಸ್ಟಡಿಗೆ ನೀಡಿದೆ. ಇಂದು ಕಸ್ಟಡಿಯ ಎರಡನೇ ದಿನವಾಗಿದ್ದು, ಪೊಲೀಸರ ಪ್ರಶ್ನೆಗಳಿಗೆ ಉತ್ತರಗಳು ಇನ್ನೂ ಸಿಕ್ಕಿಲ್ಲ. ಹೀಗಾಗಿ ಕಸ್ಟಡಿಯನ್ನು ಮುಂದುವರೆಸುವಂತೆ ಪೊಲೀಸರು ಮನವಿ ಮಾಡುವ ಸಾಧ್ಯತೆಯಿದೆ.

ಶರಣರಿಗೆ ಪುರುಷತ್ವ ಪರೀಕ್ಷೆ:

ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಶಿವಾಚಾರ್ಯ ಶರಣರ ಪುರುಷತ್ವ ಪರೀಕ್ಷೆ ಮಾಡಿದ್ದಾರೆ. ವರದಿಯಲ್ಲಿ ಶರಣರು ಗಂಡಸತ್ವ ಸಾಬೀತಾಗಿದೆ ಎಂದು ಮೂಲಗಳು ತಿಳಿಸಿವೆ. ಶರಣರ ಡಿಎನ್‌ಎ, ರಕ್ತ, ಮೂತ್ರ, ಕೂದಲು ಸೇರಿದಂತೆ ಹಲವು ಸ್ಯಾಂಪಲ್‌ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯ ಪಡೆದಿದೆ.

ಮೂಲಗಳ ಪ್ರಕಾರ, ನಿನ್ನೆ ಸಂಜೆಯೇ ಶಿವಾಚಾರ್ಯರಿಗೆ ಪುರುಷತ್ವ ಪರೀಕ್ಷೆ   ನಡೆಸಲಾಗಿತ್ತು. ಇಂದು ಬೆಳಗ್ಗೆಯೇ ಈ ಸಂಬಂಧ ವರದಿಯನ್ನು ಕೂಡ ನೀಡಲಾಗಿದೆ. ಉಳಿದ ಮಾದರಿಗಳನ್ನು ಮಡಿವಾಳದ ಎಫ್‌ಎಸ್‌ಎಲ್‌ಗೆ ರವಾನಿಸಲಾಗಿದೆ. ಈ ಹಿಂದೆ ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿ ಪುರುಷನಲ್ಲ ಎಂದು ಅಫಿಡವಿಟ್‌ ಸಲ್ಲಿಸಿದರೆ ಮಾತ್ರ ಪರೀಕ್ಷೆಗೊಳಪಡಿಸಲಾಗುತ್ತಿತ್ತು. ನಿತ್ಯಾನಂದ ಪ್ರಕರಣದಲ್ಲಿ ಇದೇ ರೀತಿ ಅಫಿಡವಿಟ್‌ ಸಲ್ಲಿಕೆಯ ನಂತರ ಪುರುಷತ್ವ ಪರೀಕ್ಷೆ ನಡೆಸಲಾಗಿತ್ತು. ಅಸಾರಾಂ ಬಾಪುವನ್ನು ಕೂಡ ಪುರುಷತ್ವ ಪರೀಕ್ಷೆಗೆ ಒಳಪಡಿಸಲಾಗಿತ್ತು.

 

Related posts

ಪರಿಶಿಷ್ಟರ ಒಳ ಮೀಸಲಾತಿ: ಕೇಂದ್ರಕ್ಕೆ ಶಿಫಾರಸು ಸಾಧ್ಯತೆ

satyadarshana

ಮುಂಬೈ ಗೆಲುವಿನಿಂದ ಆರ್‌ಸಿಬಿ ಪ್ಲೇ ಆಫ್ ಪ್ರವೇಶ ಡೆಲ್ಲಿ ಕ್ಯಾಪಿಟಲ್ಸ್ ಟೂರ್ನಿಯಿಂದ ಔಟ್

satyadarshana

‘ಬೆಂಗಳೂರಿನಲ್ಲಿ ಮುರುಘಾ ಶ್ರೀಗಳ ವಿರುದ್ಧ ದೂರು ನೀಡಲಾಗದೇ ಮಕ್ಕಳು ಆತ್ಮಹತ್ಯೆಗೆ ಮುಂದಾಗಿದ್ರು’

satyadarshana

Leave a Comment