Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆ

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ 3 ವರ್ಷ ಡಿಪ್ಲೋಮಾ ಕೋರ್ಸಗೆ ಅರ್ಜಿ ಆಹ್ವಾನ.

ಗದಗ  : ( ಸತ್ಯದರ್ಶನ ) ಸೆಪ್ಟೆಂಬರ್ 8: ಕರ್ನಾಟಕ ಕೈಮಗ್ಗ        ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ ಇಲ್ಲಿ 3 ವರ್ಷಗಳ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಪದವಿತರಗತಿಯನ್ನು ನಡೆಸುತ್ತಿದ್ದು 2022-23 ನೇ ಸಾಲಿಗಾಗಿ ಪ್ರವೇಶಕ್ಕಾಗಿ ಅಭ್ಯರ್ಥಿಗಳಿಂದ ಅರ್ಜಿಆಹ್ವಾನಿಸಲಾಗಿದೆ.
        ಸೆಪ್ಟೆಂಬರ್ 30 ರೊಳಗಾಗಿ ದಾಖಲಾತಿಗಳೊಂದಿಗೆ ಪ್ರವೇಶ ಪಡೆಯಬಹುದಾಗಿದೆ.
ಪ್ರವೇಶ ಪಡೆಯುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ದಿನಾಂಕ: 01-07-2022 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ರ ವಯೋಮಿತಿಯಲ್ಲಿರಬೇಕು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25 ರ ವಯೋಮಿತಿಯಲ್ಲಿರಬೇಕು.
ವ್ಯಾಸಂಗದ ಸಮಯದಲ್ಲಿ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ.2,500/- ಶಿಷ್ಯವೇತನ ನೀಡಲಾಗುವುದು.
ಬಾಲಕರ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿಸುವ ಆಧಾರದ ಮೇಲೆ ಕಲ್ಪಿಸಲಾಗುವುದು. ಬಾಲಕಿಯರಿಗೆ ವಸತಿ ನಿಲಯದ ಸೌಲಭ್ಯವಿರುವುದಿಲ್ಲ.
3 ವರ್ಷಗಳ ವ್ಯಾಸಂಗದ ನಂತರ ಅಭ್ಯರ್ಥಿಗಳಿಗೆ ಜವಳಿ ಹಾಗೂ ಗಾರ್ಮೆಂಟ್ಸ್ ಉದ್ಯಮದಲ್ಲಿ ಉದ್ಯೋಗ ಅವಕಾಶಗಳು ಲಭಿಸುತ್ತವೆ.
ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ ದೂರವಾಣಿ ಸಂ: 08372-297221 ಮೊಬೈಲ್ ಸಂಖ್ಯೆ: 9448644074 ಅಥವಾ ಆಯಾ ಜಿಲ್ಲೆಯ ಜಂಟಿ/ಉಪ/ಸಹಾಯಕ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಇವರುಗಳನ್ನು ಸಂಪರ್ಕಿಸಿ ಪಡೆಯಬಹುದಾಗಿದೆ.

Related posts

ಗಜೇಂದ್ರಗಡ ಹೆಚ್ಚಿದ ಅಕ್ರಮ ಮರಳು ದಂಧೆ

satyadarshana

ಮಹಾತ್ಮಾಗಾಂಧಿ ಹಾಕಿ ಕ್ರೀಡಾಂಗಣದ ಉದ್ಘಾಟನೆ ನೇರವೇರಿಸಿದ ಸಚಿವ ಡಾ.ಹೆಚ್.ಸಿ. ಮಹಾದೇವಪ್ಪ

satyadarshana

ಆಧುನಿಕ ಭಾರತದ ಶಿಲ್ಪಿ ಪಂಡಿತ್ ನೆಹರು :ಮತ್ತಿಕಟ್ಟಿ 

satyadarshana

Leave a Comment