ಗದಗ : ( ಸತ್ಯ ದರ್ಶನ ) ಸೆಪ್ಟೆಂಬರ್ 8: 2022-23 ನೇ ಸಾಲಿನಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ ( ಹೊಸತು) , ಅರಿವು ಶೈಕ್ಷಣಿಕ ಸಾಲ ಯೋಜನೆ ( ನವೀಕರಣ) ಹಾಗೂ ಶೈಕ್ಷಣಿಕ ಸಾಲ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಅಕ್ಟೋಬರ್ 20ರೊಳಗಾಗಿ ಸೇವಾ ಸಿಂಧು ಪೋರ್ಟಲ್ ಮುಖಾಂತರ ಆನ್ಲೈನ್ನಲ್ಲಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ http://www.dbcdc.karnataka.gov.in ವೆಬ್ಸೈಟ್ನಲ್ಲಿ ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿರುತ್ತದೆ.
ನಿಗಮದ ಸಹಾಯವಾಣಿ ಸಂಖ್ಯೆ: 08372-232327 ಹಾಗೂ 080-22374832, ಆನ್ಲೈನ ಮುಖಾಂತರ ಸಲ್ಲಿಸಲಾದ ಅರ್ಜಿಯನ್ನು ನಿಗದಿತ ದಾಖಲಾತಿಗಳೊಂದಿಗೆ ಲಗತ್ತಿಸಿ, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರೂ.ನಂ: 202, 2ನೇ ಮಹಡಿ, ಜಿಲ್ಲಾ ಆಡಳಿತ ಭವನ, ಗದಗ ಜಿಲ್ಲೆಯನ್ನು ಸಂಪರ್ಕಿಸಿ ಅಕ್ಟೋಬರ್ 20 ರೊಳಗೆ ಸಲ್ಲಿಸಬಹುದಾಗಿದೆ.