Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ.

ಗದಗ:(ಸತ್ಯದರ್ಶನ) ಅ.14:  ನಾಡು-ನುಡಿಯ ಬಗ್ಗೆ ಅಭಿಮಾನ ಮೂಡಿಸುವ, ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವ ಗೀತೆ ಕವನಗಳನ್ನು ನಾಡಿನ ಹೆಮ್ಮೆಯ ಕವಿಗಳು ರಚಿಸಿದ್ದು ಇವುಗಳ ಕೇಳುವಿಕೆಯು ನಮ್ಮಲ್ಲಿ ಅಭಿಮಾನವನ್ನು ಮೂಡಿಸುತ್ತದೆ, ಈ ದೃಷ್ಠಿಯಿಂದ ಈ ಗೀತೆಗಳು ಕನ್ನಡದ ಶಕ್ತಿ ಕಳೆದ ರಾಜ್ಯೋತ್ಸವದ ಸಂದರ್ಭದಲ್ಲಿ ಪ್ರಾತಿನಿಧಿಕವಾಗಿ ಆಯ್ದ 3 ಕನ್ನಡ ಗೀತೆಗಳ ಸಮೂಹ ಗಾಯನವನ್ನು ವಿನೂತನವಾಗಿ “ಲಕ್ಷ ಕಂಠ ಗೀತ ಗಾಯನ” ಶೀರ್ಷಿಕೆಯಡಿ ರಾಜ್ಯಾದ್ಯಂತ ಆಯೋಜಿಸಿ ಯಶಸ್ವಿಗೊಳಿಸಿದ ನಿಟ್ಟಿನಲ್ಲಿ ಈ ವರ್ಷವು ಅಕ್ಟೋಬರ್ 28 ರಂದು “ಕೋಟಿ ಕಂಠ ಗೀತ ಗಾಯನ” ಕಾರ್ಯಕ್ರಮವನ್ನು ಸರ್ಕಾರದ ವತಿಯಿಂದ ಆಯೋಜಿಸಲಾಗುತ್ತಿದೆ.  

ಈ ವಿಶೇಷ ಕಾರ್ಯಕ್ರಮದಲ್ಲಿ ಒಂದು ಕೋಟಿ ಜನರನ್ನು ಭಾಗಿಯಾಗಿಸಲು ಉದ್ದೇಶಿಸಲಾಗಿದೆ.
     ನನ್ನ ನಾಡು ನನ್ನ ಹಾಡು ಸಮೂಹ ಗೀತ ಗಾಯನ: ನಾಡಗೀತೆ,ಹುಯಿಲಗೋಳ ನಾರಾಯಣರಾಯರ  ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು,  ರಾಷ್ಟ್ರಕವಿ ಕುವೆಂಪುರವರ ಬಾರಿಸು ಕನ್ನಡ ಡಿಂಡಿಮವ , ಡಾ. ಡಿ. ಎಸ್. ಕರ್ಕಿಯವರ ಹಚ್ಚೇವು ಕನ್ನಡದ ದೀಪ , ನಾಡೋಜ ಡಾ.ಚನ್ನವೀರ ಕಣವಿಯವರ ವಿಶ್ವ ವಿನೂತನ ವಿದ್ಯಾ ಚೇತನ, ಡಾ. ಹಂಸಲೇಖರವರ “ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಈ ಗೀತೆಗಳನ್ನು ದಿನಾಂಕ:28.10.2022 ರಂದು ಬೆಳಿಗ್ಗೆ:11  ಗಂಟೆಗೆ ಏಕಕಾಲದಲ್ಲಿ  ಹಾಡುವುದು.
       ಕೋಟಿ ಕಂಠ ಗೀತ ಗಾಯನದ ನೋಂದಣಿ: ಕಾರ್ಯಕ್ರಮದಲ್ಲಿ ಭಾಗವಹಿಸುವವರು ನೋಂದಾಯಿಸಿ ಭಾಗವಹಿಸಿದವರಿಗೆ ಸ್ವಯಂಚಾಲಿತ ಆನ್‍ಲೈನ್ ಪ್ರಮಾಣ ಪತ್ರ ನೀಡಲಾಗುವುದು ನೋಂದಣಿ ಅಭಿಯಾನವನ್ನು ಅಕ್ಟೋಬರ್ 11 ರಿಂದ 28 ರವರೆಗೆ ನೋಂದಣಿ ಮಾಡಬಹುದಾಗಿದೆ. ಆನ್‍ಲೈನ್ ನೋಂದಣಿಗಾಗಿ ಲಿಂಕ್ https:kannadasiri.karnataka.gov.in/kkg/public/ ಆಗಿರುತ್ತದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮಹಿಳೆಯರಿಂದ ಗ್ರಾಮ ಪಂಚಾಯಿತಿಗೆ ಮುತ್ತಿಗೆ.

satyadarshana

ದುಂದು ವೆಚ್ಚಕ್ಕ್ಕ್ಕೆ ಕಡಿವಾಣ ಹಾಕಲು ಅಬ್ಬರ ಮದುವೆಗಳ ಬದಲು, ಆಡಂಬರವಿಲ್ಲದ ಸರಳ ಸಾಮೂಹಿಕ ವಿವಾಹ.

satyadarshana

ಕೇಂದ್ರ ಬಿಜೆಪಿ ಸರಕಾರದ ಬೆಲೆ ಎರಿಕೆ ಖಂಡಿಸಿ ವಲಯವಾರು ಪ್ರತಿಭಟನೆ

satyadarshana

Leave a Comment