ಗದಗ ( ಸತ್ಯದರ್ಶನ ) ನವೆಂಬರ್ 15 : ಅಟಲ್ ಭೂಜಲ ಯೋಜನೆ ಜಾರಿಗೊಳ್ಳುತ್ತಿರುವ ನಿಟ್ಟಿನಲ್ಲಿ ಅಟಲ್ ಭೂಜಲ ಯೋಜನೆ ಜಾರಿಯಲ್ಲಿರುವ ತಾಲೂಕುಗಳಲ್ಲಿ ಕಾರ್ಯಕ್ರಮಗಳನ್ನು ಪಾಲುದಾರ ಇಲಾಖೆಗಳ ಒಗ್ಗೂಡಿಸುವಿಕೆಯೊಂದಿಗೆ ಅನುಷ್ಟಾನಗೊಳಿಸಲು ಹಾಗೂ ಮೇಲ್ವಿಚಾರಣೆ ಮಾಡಲು ತಾಲೂಕು ಮಟ್ಟದಲ್ಲಿ ಸಮಿತಿಯನ್ನು ರಚಿಸುವ ನಿಟ್ಟಿನಲ್ಲಿ ತಾಲೂಕು ಮಟ್ಟದಲ್ಲಿ ಮಂಗಳವಾರದಂದು ಗದಗ ತಾಲೂಕು ಪಂಚಾಯತಿಯಲ್ಲಿ ಸಭೆಯನ್ನು ನಡೆಸಲಾಯಿತು.
ಈ ಸಭೆಯಲ್ಲಿ ಅಟಲ್ ಭೂಜಲ ನೋಡಲ್ ಅಧಿಕಾರಿ ನಾಗಶೆಟ್ಟಿ ಚಂದ್ರಶೇಖರ , ತಾ.ಪಂ. ಇ.ಓ ಕೃಷ್ಣಪ್ಪ ಧರ್ಮರ, ತಾ.ಪಂ. ಸಹಾಯಕ ನಿರ್ದೇಶಕ ಕುಮಾರ್ ಪೂಜಾರ , ಜಿಲ್ಲಾ ಕಾರ್ಯಕ್ರಮ ನಿರ್ವಹಣಾ ಘಟಕ ಗದಗ ಕಛೇರಿಯ ಎಲ್ಲ ತಜ್ಞರು, ಸಿಬ್ಬಂದಿಯವರು, ಇಲಾಖೆಯ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು
