ನರೇಗಲ್ಲ : ಪಟ್ಟಣ ಪಂಚಾಯಿತಿ ಕಾರ್ಯಾಲಯಕ್ಕೆ ಮಂಗಳವಾರ ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಭೇಟಿ ನೀಡಿದರು. 
ಪ.ಪಂ ಸಭಾಭವನದಲ್ಲಿ ಡೋರ್ ಕ್ಲೋಜ್ ಗೌಪ್ಯ ಸಭೆ ನಡೆಸುವ ಉದ್ದೇಶದಿಂದ ಮಾಧ್ಯಮ ಪ್ರತಿನಿಧಿಗಳನ್ನು ಹೊರಗೆ ಕಳುಹಿಸಿದ ಘಟನೆ ಜರುಗಿದೆ. ಸಭೆ ಮುಗಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತೇನೆ. ದಯವಿಟ್ಟು ಮಾಧ್ಯಮ ಪ್ರತಿನಿಧಿಗಳು ಹೊರಗೆ ಹೋಗಿ ಎಂದು ಮನವಿ ಮಾಡಿಕೊಂಡಿದ್ದರೆ. ಆದರೆ, ಸಭೆ ಮುಗಿದ ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಕಾರ್ಯಾಲಯದಿಂದ ಹೊರಗೆ ಹೋಗಿದ್ದಾರೆ. 
ನಂತರ ಪಟ್ಟಣದ ಘಟತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಅಲ್ಲಿ ನೆಡೆದ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು. ಅಲ್ಲದೇ, ಪಟ್ಟಣದ ಐತಿಹಾಸಿಕ ಹಿರೇಕೆರೆಗೆ ಭೇಟಿ ನೀಡಿದರು. ಈ ವೇಳೆ ನೂತನವಾಗಿ ಮುಖ್ಯಾಧಿಕಾರಿಯಾಗಿ ನೇಮಕರಾದ ಶಿವಾನಂದ ಅಜ್ಜಣ್ಣನವರ ಅವರಿಗೆ ಈ ಐತಿಹಾಸಿಕ ಹಿರೇಕೆರೆಯನ್ನು ಸ್ವಚ್ಛಗೊಳಿಸುವಂತೆ ತಿಳಿಸಿದರು. 
