Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಗದಗ ಮೃಗಾಲಯಕ್ಕೆ ಆಗಮಿಸಲಿವೆ ಮತ್ತೆರಡು ಸಿಂಹಗಳು..  

 

ಗದಗ: ಬಿಂಕದಕಟ್ಟಿ ಮೃಗಾಲಯಕ್ಕೆ ಎರಡು ಸಿಂಹ ಆಗಮಿಸಲಿವೆ..

ನವದೆಹಲಿಯ ಕೇಂದ್ರೀಯ ಮೃಗಾಲಯ ಪ್ರಾಧಿಕಾರದ ಪ್ರಾಣಿ ವಿನಿಮಯ ಕಾರ್ಯಕ್ರಮದಡಿ ಗದಗ ಮೃಗಾಲಯದಿಂದ ಕಪಿಲ( ಗಂಡು) ಮತ್ತು ಕಸ್ತೂರಿ ( ಹೆಣ್ಣು) ಎರಡು ತೋಳಗಳನ್ನು “ ಕಮಲಾ ನೆಹರು ಪ್ರಾಣಿ ಸಂಗ್ರಹಾಲಯ ಇಂಧೋರ ಮಧ್ಯಪ್ರದೇಶಗೆ ಹಸ್ತಾಂತರಿಸಿ, ಇಂದೋರ ಮೃಗಾಲಯದಿಂದ ಶಿವ ( ಗಂಡು) ಮತ್ತು ಗಂಗಾ ( ಹೆಣ್ಣು) ಎಂಬ ಹೆಸರಿನ ಎರಡು ಸಿಂಹಗಳನ್ನು ಪಡೆಯಲು ಅನುಮತಿ ನೀಡಿದೆ.

ಈ ಸಿಂಹಗಳು ಡಿಸೆಂಬರ್ 8 ರಂದು ಬೆಳಿಗ್ಗೆ 10 ಗಂಟೆಗೆ ಗದಗ ಮೃಗಾಲಯಕ್ಕೆ ಆಗಮಿಸುತ್ತಿದ್ದು, ಗದಗ ಶಾಸಕ ಎಚ್.ಕೆ.ಪಾಟೀಲ ಸ್ವಾಗತಿಸುವರು. ನೂತನ ನರಿ ಪ್ರಾಣಿಮನೆ ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ಆಯೋಜಿಸಲಾಗಿದೆ ಎಂದು ಗದಗ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಭೆ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ, ಸುಗಮ ಸಂಚಾರಕ್ಕೆ ಅವಕಾಶ ನೀಡಿ

satyadarshana

ಮಹಿಳೆಯರ ಮೇಲಿನ ದೌರ್ಜನ್ಯ ತಡೆಗೆ ಕಾನೂನಿನ ಅರಿವು ಹಾಗೂ ಮನಸ್ಥಿತಿ ಬದಲಾವಣೆ ಅಗತ್ಯ :ಜಿಲ್ಲಾ ನ್ಯಾ. ಬಸವರಾಜ

satyadarshana

2021ನೇ ಸಾಲಿಗೆ ಸಿದ್ದಗಂಗಾ ಶಿಕ್ಷಣ ಸಂಸ್ಥೆ, ಮಠಕ್ಕೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಘೋಷಣೆ

satyadarshana

Leave a Comment