Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಅಂತರರಾಷ್ಟ್ರೀಯ ಕ್ರಿಕೆಟಿಗ ಸುನಿಲ್ ಜೋಶಿ ಮನವಿಗೆ ಸಾರಿಗೆ ಸಚಿವ ರಾಮುಲು ಸ್ಪಂದನೆ..

 

ಗದಗ : ನಗರಕ್ಕೆ ವೋಲ್ವೊ ಬಸ್‌ ಸರ್ವಿಸ್ ಬೇಕು ಅಂತಾ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಟ್ವೀಟ್ ಮಾಡಿ ಸುನಿಲ್ ಜೋಶಿ ಮನವಿ ಮಾಡಿದ್ರು. ಜೋಶಿ ಮನವಿಗೆ ಸಾರಿಗೆ ಸಚಿವ ಬಿ. ಶ್ರೀರಾಮುಲು ಸ್ಪಂದಿಸಿದ್ದಾರೆ…

ಜನವರಿ 9ರಿಂದಲೇ ಬೆಂಗಳೂರಿನಿಂದ ವೊಲ್ವೋ ಬಸ್ ಸೇವೆ ಆರಂಭಿಸುವುದಾಗಿ ಶ್ರೀರಾಮುಲು ತಿಳಿಸಿದ್ದಾರೆ.. ಈ ಬಗ್ಗೆ ಟ್ವೀಟ್ ಮಾಡಿರುವ ರಾಮುಲು, ಬೆಂಗಳೂರು ನಗರದಿಂದ ಗದಗಕ್ಕೆ ವೊಲ್ವೋ ಬಸ್ ಸೇವೆ ಆರಂಭ ಮಾಡುವುದಾಗಿ ಹೇಳಿದ್ದಾರೆ.

ನಾವು ಜನರ ಸೇವೆಗಾಗಿಯೇ ಇದ್ದೇವೆ. ಜನವರಿ 9ರ ಸೋಮವಾರದಿಂದಲೇ ಗದಗಕ್ಕೆ ವೊಲ್ವೋ ಬಸ್ ಸೇವೆ ಆರಂಭಿಸಲಿದೆ. ಗದಗ ಪುಟ್ಟರಾಜ ಗವಾಯಿಗಳ ಪುಣ್ಯಭೂಮಿ. ನನ್ನ ಹೃದಯಕ್ಕೆ ಹತ್ತಿರವಾದ ಜನರಿಗಾಗಿ ಬಸ್ ಸೇವೆ ಆರಂಭಿಸಲಾಗುತ್ತದೆ ಎಂದು ಟ್ವೀಟ್‌ನಲ್ಲಿ ಸಾರಿಗೆ ಸಚಿವರು ಮಾಹಿತಿ ನೀಡಿದ್ದಾರೆ.

ಬಿ. ಶ್ರೀರಾಮುಲು ಹಿಂದೆ ಗದಗ ಜಿಲ್ಲಾ ಉಸ್ತುವಾರಿಯಾಗಿದ್ದರು. ಜಿಲ್ಲೆಯ ಮೇಲೆ ಅವರಿಗೆ ಅಪಾರವಾದ ಪ್ರೀತಿ ಇದೆ.. ಮಾಜಿ ಕ್ರಿಕೆಟಿಗ ಸುನಿಲ್ ಜೋಶಿ ಮೂಲತಃ ಗದಗದವರು. ನಗರದ ವಿಡಿಎಸ್​ಟಿ ಹೈಸ್ಕೂಲ್‌ನಲ್ಲಿ ಓದಿದ ಅವರು, ಎಎಸ್​ಎಸ್​​ ವಾಣಿಜ್ಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಅಭ್ಯಾಸ ಮಾಡಿದವರು. ಕ್ರಿಕೆಟ್‌ ರಂಗದ ಹಲವು ಹಂತಗಳನ್ನು ದಾಟಿ ಬಿಸಿಸಿಐನ ಆಯ್ಕೆ ಸಮಿತಿಯ ಮುಖ್ಯಸ್ಥರು ಆಗಿದ್ದ ಜೋಶಿ ಅವರ ಕ್ರಿಕೆಟ್‌ ಅಭ್ಯಾಸ ಆರಂಭವಾಗಿದ್ದೂ ಗದಗನಲ್ಲೇ ಎಂಬುದು ವಿಶೇಷ. ಕೆಲವು ದಿನಗಳ ಕಾಲ ಅಭ್ಯಾಸಕ್ಕಾಗಿ ಪ್ರತಿದಿನ ಬೆಳಗ್ಗೆ ಹುಬ್ಬಳ್ಳಿಗೆ ಪ್ರಯಾಣಿಸುತ್ತಿದ್ದರು..

ಇತ್ತೀಚೆಗೆ ಕರ್ನಾಟಕದ ಮುಖ್ಯಮಂತ್ರಿಗಳ ಟ್ವೀಟ್ ಖಾತೆಗೆ ಟ್ಯಾಗ್ ಮಾಡಿ ಸುನಿಲ್ ಜೋಶಿ, ಬಸ್ ವ್ಯವಸ್ಥೆ ಮಾಡುವಂತೆ ಟ್ವೀಟ್ ಮಾಡಿದ್ದರು. ನನ್ನ ವಿನಯ ಪೂರ್ವಕ ಮನವಿ ಬೆಂಗಳೂರಿನಿಂದ ಗದಗಕ್ಕೆ ವೊಲ್ವೋ ಬಸ್ ಸೇವೆ ಆರಂಭವಾಗಬೇಕು. ಇದಕ್ಕಾಗಿ ನಾವು 25 ವರ್ಷಗಳಿಂದ ಕಾಯುತ್ತಿದ್ದೇವೆ ಎಂದಿದ್ದರು, ಜೋಶಿ ಸ್ವೀಟ್ ಗೆ ಈಗ ಸ್ಪಂದನೆ ಸಿಕ್ಕಿದೆ.

 

Related posts

ಹಲವಾರು ಚಳುವಳಿ ಮಾಡುವ ಮೂಲಕ ಎಲ್ಲಾ ಸರ್ಕಾರಗಳಿಗೆ ನಮ್ಮ ಎಚ್ಚರಿಕೆ ಕೊಟ್ಟಿದ್ದೇವೆ.ಬಸವರಾಜ ಕಡಿಬಿನ

satyadarshana

ಭವಿಷ್ಯಕ್ಕಾಗಿ ಪರಿಸರ ಕಾಳಜಿ ಮುಖ್ಯ’….. ವನಸಿರಿ ಅಮರೇಗೌಡ ಮಲ್ಲಾಪುರ

satyadarshana

ಬನಶಂಕರಿ ದೇವಿ ಜಾತ್ರೆ ರದ್ದು, ಕೋಟ್ಯಂತರ ವ್ಯಾಪಾರಕ್ಕೆ ಗುದ್ದು;ಬೀದಿಗೆ ಬಿದ್ದ ವ್ಯಾಪಾರಸ್ಥರು..

satyadarshana

Leave a Comment