Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಜಿಲ್ಲಾ‌ ಮಟ್ಟದ ಫಲಾನುಭವಿಗಳ‌ ಸಮ್ಮೇಳನ : ಸಿದ್ಧತೆಗಳ ಪರೀಶಿಲನೆ

ಗದಗ: ಮಾ.12:  ಜಿಲ್ಲಾ ಮಟ್ಟದ ಫಲಾನುಭವಿಗಳ ಸಮ್ಮೇಳನವು ಸೋಮವಾರದಂದು ಬೆಳಿಗ್ಗೆ 11  ಗಂಟೆಗೆ ರೋಣ‌ ಹೊರವಲಯದಲ್ಲಿ ಜರುಗಲಿದೆ. ಕಾರ್ಯಕ್ರಮದ ಅಂತಿಮ ಹಂತದ ಸಿದ್ಧತೆಗಳನ್ನು ಶಾಸಕರಾದ ಕಳಕಪ್ಪ ಬಂಡಿ ಹಾಗೂ ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್ ಅವರು ಪರಿಶೀಲಿಸಿದರು.

 ಕಾರ್ಯಕ್ರಮದ ಮುಖ್ಯ ವೇದಿಕೆ, ಫಲಾನುಭವಿ, ಸಾರ್ವಜನಿಕರ ಆಸನ ವ್ಯವಸ್ಥೆ ಹಾಗೂ ವಾಹನ ನಿಲುಗಡೆ ಸೇರಿದಂತೆ ಸಮ್ಮೇಳನಕ್ಕೆ ಆಗಮಿಸುವ ಫಲಾನುಭವಿ ಹಾಗೂ ಸಾರ್ವಜನಿಕರಿಗೆ ಮಾಡಲಾದ ಊಟದ ವ್ಯವಸ್ಥೆ ಸಿದ್ಧತೆಯನ್ನು ಪರಿಶೀಲಿಸಿದರು.  ಕಾರ್ಯಕ್ರಮದಲ್ಲಿ ಯಾವುದೇ ಅನಾನೂಕುಲಗಳಾಗದಂತೆ ನಿಗಾವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೇ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ ಬಿ., ಅಪರ‌ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ, ಉಪವಿಭಾಗಾಧಿಕಾರಿ ಅನ್ನಪೂರ್ಣ, ತಹಶೀಲ್ದಾ ವೀಣಾ ಉಂಕಿ, ಆಹಾರ ಇಲಾಖೆ ಉಪನಿರ್ದೆಶಕ ಗಂಗಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಸೋಮವಾರದಂದು ಜರುಗಲಿರುವ ಜಿಲ್ಲಾ ಮಟ್ಟದ ಫಲಾನುಭವಿಗಳ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಹಾಗೂ ರಾಜ್ಯ ಸರಕಾರಗಳ ರೋಣ ಮತ ಕ್ಷೇತ್ರದ  ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಜೊತೆಗೆ ವಿವಿಧ ಇಲಾಖೆಗಳ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯ ಹಾಗೂ ಹಕ್ಕು ಪತ್ರ ವಿತರಣಾ ಕಾರ್ಯಕ್ರಮ ಜರುಗಲಿದೆ.

Related posts

ಶ್ರೀ ಅಟಲ್ ಬಿಹಾರಿ ವಾಜಪೇಯಿ ಕಾನೂನು ಮಹಾ ವಿದ್ಯಾಲಯ ಶುಲ್ಕ ಹೆಚ್ಚಳ : ವಿದ್ಯಾರ್ಥಿಗಳಿಂದ ಪ್ರತಿಭಟನೆ

satyadarshana

‘ಗಂಗಾ ಕಲ್ಯಾಣ’ ಪಂಪಸೆಟ್‌ಗಳು ಸದ್ಬಳಕೆ ಮಾಡಿಕೊಂಡು ಫಲಾನುಭವಿಗಳು ಆರ್ಥಿಕ ಪ್ರಗತಿ ಹೊಂದಬೇಕು’ಬಯ್ಯಾಪುರ ಅಮರೇಗೌಡ,

satyadarshana

ಸಮಯಕ್ಕೆ ಮಹತ್ವ ಕೊಟ್ಟಾಗ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ

satyadarshana

Leave a Comment