ಗದಗ : ಮಾರ್ಚ್ 30 .ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ 2023ಕ್ಕೆ ಕುರಿತಂತೆ ಈಗಾಗಲೇ ಜಿಲ್ಲಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಾಲ್ಲಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ, ದೂರು ಹಾಗೂ ಚುನಾವಣೆ ಕುರಿತಂತೆ ಮಾಹಿತಿಗಾಗಿ ಜಿಲ್ಲಾಡಳಿತ ಭವನದಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ.
ಚುನಾವಣೆ ಕುರಿತಂತೆ ಸಲಹೆ, ಮಾಹಿತಿ ಹಾಗೂ ದೂರು ಕುರಿತು ಸಹಾಯವಾಣಿ ಸಂಖ್ಯೆ 1950 ಹಾಗೂ 08372-239177 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ. ಹಾಗೂ ದೂರು ದಾಖಲೆಗಾಗಿ ಸಿವಿಜಿಲ್ ( cVIGIL ) ಆಪ್ ಮೂಲಕ ಸಾರ್ವಜನಿಕರು ದೂರು ದಾಖಲಿಸಬಹುದಾಗಿದೆ.
