Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಚೆಕ್ ಪೋಸ್ಟಗಳಿಗೆ ಅನೀರಿಕ್ಷಿತ ಭೇಟಿ ನೀಡಿದ ಡಾ.ಸುಶೀಲಾ ಬಿ

ಚೆಕ್ ಪೋಸ್ಟ್ ಗಳಿಗೆ ಅನೀರಿಕ್ಷಿತ ಭೇಟಿ ನೀಡಿದ ಡಾ.ಸುಶೀಲಾ ಬಿ 

ಗದಗ : ಮಾ 30 : ಕರ್ನಾಟಕ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಅಕ್ರಮ ನಗದು, ಸಾಮಗ್ರಿ ತಡೆಗಾಗಿ ಜಿಲ್ಲೆಯಾದ್ಯಂತ 18 ಸ್ಥಳಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆದು ನಿರಂತರವಾಗಿ ವಾಹನಗಳ ತಪಾಸಣೆ ನಡೆಯುತ್ತಿದೆ.

ಗೋನಾಳ ಚೆಕ್ ಪೋಸ್ಟ್‌ಗೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುಶೀಲಾ ಬಿ ಅವರು ಅನಿರ್ದಿಷ್ಟವಾಗಿ ಭೇಟಿ ನೀಡಿ ಪರಿಶೀಲಿಸಿದರು. ಚೆಕ್ ಪೋಸ್ಟ್ನಲ್ಲಿ ನಡೆಸಲಾಗುವ ತಪಾಸಣೆ ಕುರಿತು ಮಾಹಿತಿ ಪಡೆದ ಅವರು. ದಾಖಲೆಗಳಿಲ್ಲದೆ ನಗದು, ಸಾಮಗ್ರಿ, ಚಿನ್ನಾಭರಣ, ಮಧ್ಯ ಮತ್ತು ವಾಣಿಜ್ಯ ಸರಕುಗಳನ್ನು ವಾಹನಗಳಲ್ಲಿ ಸಾಗಾಟ ಮಾಡುತ್ತಿರುವುದನ್ನು ಪರಿಶೀಲಿಸಬೇಕು. ದಾಖಲೆ ರಹಿತ ಸಾಮಗ್ರಿ, ನಗದು ದೊರೆತಿರುವ ನಿಯಮಾನುಸಾರ ಪ್ರಕರಣ ದಾಖಲಿಸುವಂತೆ ಚೆಕ್ ಪೋಸ್ಟ್‌ನಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿ ಸಿಬ್ಬಂದಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಯೋಜನಾಧಿಕಾರಿ ವಾಗೀಶ ಪಂಡಿತಾರಾಧ್ಯ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಾ ಧರ್ಮರ ಸಹ ಚೆಕ್ ಪೋಸ್ಟ್ ಅಧಿಕಾರಿ ಸಿಬ್ಬಂದಿಗಳು.

Related posts

ಕೊಪ್ಪಳ ಜಿಲ್ಲಾ ರಜತ ಮಹೋತ್ಸವ: ಗಮನ ಸೆಳೆದ ಮೆರವಣಿಗೆ —

satyadarshana

ರಾಯರ ಹೆಸರು ಮನಸಾರೆ ಹೇಳುತ್ತ “ರಾಜಾಸೀಟ್” ಚಿತ್ರ ತಂಡಕ್ಕೆ ಶುಭ ಕೋರಿದ ನವರಸ ನಾಯಕ.

satyadarshana

ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಅಗತ್ಯ : ಜಿಲ್ಲಾ ನ್ಯಾ. ಬಸವರಾಜ

satyadarshana