Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ವಿಧಾನಸಭಾ ಚುನಾವಣೆ: ಕೊಪ್ಪಳ ಜಿಲ್ಲೆಯಲ್ಲಿ 601 ಅಬಕಾರಿ ಪ್ರಕರಣಗಳು ದಾಖಲು.

ಕೊಪ್ಪಳ ಏಪ್ರಿಲ್ 28: 2023ರ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಯು ಅಕ್ರಮಗಳ ಮೇಲೆ ಹದ್ದಿನ ಕಣ್ಣಿಟ್ಟು ಮಾರ್ಚ್ 29 ರಿಂದ ಏಪ್ರಿಲ್ 25ರವರೆಗೆ ಜಿಲ್ಲೆಯಲ್ಲಿ ಒಟ್ಟು 601 ಅಬಕಾರಿ ಪ್ರಕರಣಗಳನ್ನು ದಾಖಲಿಸಿದೆ.

ಅಬಕಾರಿ ಉಪ ಆಯುಕ್ತರಾದ ಸೆಲೀನಾ ಸಿ ಇವರ ನೇತೃತ್ವದಲ್ಲಿ ಕೊಪ್ಪಳ ಜಿಲ್ಲಾ ವ್ಯಾಪ್ತಿಯಲ್ಲಿ ಘೋರ-62, ಸಾಮಾನ್ಯ-54 ಹಾಗೂ ಕಲಂ15(ಎ)-485 ಸೇರಿ ಒಟ್ಟು-601 ಪ್ರಕರಣಗಳು ದಾಖಲಿಸಿ ಸುಮಾರು 3848.230 ಲೀಟರ್ ಮದ್ಯ, 5543.510 ಲೀಟರ್ ಬಿಯರ್ ಹಾಗೂ 167.250 ಲೀಟರ್ ಗೋವಾ ಮದ್ಯ ಮತ್ತು ದ್ವಿ ಚಕ್ರ ವಾಹನಗಳು-50, ನಾಲ್ಕು ಚಕ್ರ ವಾಹನ-01, ಹೇವ್ವಿ ವೆಹಿಕಲ್ 01 ಜಪ್ತುಪಡಿಸಿಕೊಂಡು ಒಟ್ಟು 19 ಅರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಎಲ್ಲಾ ಪ್ರಕರಣಗಳಲ್ಲಿ ಜಪ್ತುಪಡಿಸಿದ ಮುದ್ದೆಮಾಲು ಹಾಗೂ ವಾಹನಗಳ ಒಟ್ಟು ಅಂದಾಜು ಮೌಲ್ಯ 96,26,279 ರೂ. ಗಳಾಗಿರುತ್ತದೆ ಎಂದು ಕೊಪ್ಪಳ ಅಬಕಾರಿ ಉಪ ಆಯುಕ್ತರ ಕಚೇರಿಯ ಪ್ರಕಟಣೆ ತಿಳಿಸಿದೆ.

Related posts

ಕಾನೂನು ವ್ಯವಸ್ಥೆ ಅತ್ಯಂತ ಸುವ್ಯವಸ್ಥಿತವಾಗಿಸಲು ಥರ್ಡ ಐ ಶೀಘ್ರ ಜಾರಿ ಸಚಿವ ಎಚ್.ಕೆ.ಪಾಟೀಲ

satyadarshana

ಮಕ್ಕಳ ಜೊತೆಗೂಡಿ ಸರತಿ ಸಾಲಿನಲ್ಲಿ ಕುಳಿತು ಊಟ ಮಾಡಿ ಸರಳತೆ ಮೆರೆದ ಸಿಇಓ ಭರತ ಎಸ್

satyadarshana

ವಿಧಾನ ಸಭೆ ಸಾರ್ವತ್ರಿಕ ಚುನಾವಣೆ-2023 ಸಲಹೆ ದೂರುಗಳಿಗಾಗಿ ಸಹಾಯವಾಣಿ

satyadarshana

Leave a Comment