Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಕಾನೂನು ವ್ಯವಸ್ಥೆ ಅತ್ಯಂತ ಸುವ್ಯವಸ್ಥಿತವಾಗಿಸಲು ಥರ್ಡ ಐ ಶೀಘ್ರ ಜಾರಿ ಸಚಿವ ಎಚ್.ಕೆ.ಪಾಟೀಲ

ಗದಗ : ಜೂನ್ ೩೦: ಗದಗನಲ್ಲಿ ಕಾನೂನು ವ್ಯವಸ್ಥೆ ಅತ್ಯಂತ ಸುವ್ಯವಸ್ಥಿತವಾಗಿ ಜಾರಿಗೊಳಿಸುವ ಉದ್ದೇಶದಿಂದ ಥರ್ಡ ಐ ಎಂಬ ಯೋಜನೆಯನ್ನು ಶೀಘ್ರವೇ ಜಾರಿಗೊಳಿಸಲಾಗುವುದು ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಹೇಳಿದರು.

  • ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಶುಕ್ರವಾರದಂದು ಸೆಗ್‌ವೇ ಇಲೆಕ್ಟ್ರಿಕ್ ಬೈಕ್‌ಗಳ ಪ್ರಾಯೋಗಿಕ ಚಾಲನೆಯನ್ನು ವೀಕ್ಷಿಸಿ ಸಚಿವ ಎಚ್.ಕೆ.ಪಾಟೀಲ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಥರ್ಡಐ ಯೋಜನೆಯಲ್ಲಿ ಸೆಗ್ ವೇ ಎಲೆಕ್ಟ್ರಿಕ್ ಬೈಕ್‌ಗಳು ಸಹ ಪೊಲೀಸ ಇಲಾಖೆಗೆ ಸಹಕಾರಿಯಾಗಿವೆ ಎಂದರು.

ಕಲೆ, ಸಂಸ್ಸೃತಿ, ಇತಿಹಾಸ, ಪರಂಪರೆಗೆ ಹೆಸರುವಾಸಿಯಾದ ನಗರ ಗದಗ ಪ್ರವಾಸಿಗರನ್ನು ಕೈ ಬೀಸಿ ಕರೆಯುವ ನೆಲ. ಈ ಸ್ಥಳದಲ್ಲಿ ಕಾನೂನುವ್ಯವಸ್ಥೆ ಉನ್ನತಮಟ್ಟದಲ್ಲಿ ಇರಬೇಕೆಂಬ ಸದುದ್ದೇಶದಿಂದ ಹಾಗೂ ಜನಸಾಮಾನ್ಯರಿಗೆ ಅನುಕೂಲ ಹಾಗೂ ಸಂರಕ್ಷಣೆಗಾಗಿ ಸಂಚಾರಿ ನಿಯಮಗಳ ಕಟ್ಟುನಿಟ್ಟಿನ ಪಾಲನೆಗಾಗಿ ಥರ್ಡ ಐ ಯೋಜನೆ ಜಾರಿಗೊಳಿಸಲಾಗುತ್ತಿದೆ. 

ಶಾಂತಿಯುತ, ಸುರಕ್ಷಿತ ಗದಗಿಗಾಗಿ ಥರ್ಡ ಐ ಸ್ಮಾರ್ಟ ಪೊಲೀಸ್ ಫಾರ್ ಸೇಫ್ ಗದಗ ಬೆಟಗೇರಿ ಯೋಜನೆಯ ಕಾಮಗಾರಿ ಈಗಾಗಲೇ ಆರಂಭಿಸಲಾಗಿದೆ ಹಂತ ಹಂತವಾಗಿ ಈ ಯೋಜನೆಯನ್ನು ಪೂರ್ಣಗೊಳಿಸಿ ಜಾರಿಗೊಳಿಸಲಾಗುತ್ತಿದೆ. ಈಗಾಗಲೇ ಪೊಲೀಸ ಇಲಾಖೆಯ ಜಿಲ್ಲಾ ಕಚೇರಿಯಲ್ಲಿ ಕಮಾಂಡ್ ಸೆಂಟರ್, ಟ್ರಾಫಿಕ್ ಮ್ಯಾನ್ಭೆಜ್‌ಮೆಂಟ್, ಕ್ರ್ರೈಂ ಮುಂಜಾಗ್ರತೆಗಾಗಿ ಕ್ರ್ರಮವಹಿಸಿದೆ. ಗದಗ ಬೆಟಗೇರಿ ನಗರದ ಪ್ರಮುಖ ೪೪ ಸ್ಥಳಗಳಲ್ಲಿ ಬುಲೆಟ್ ಕ್ಯಾಮರಾ ಅಳವಡಿಸಿದೆ. ೪೦ ಕಿ.ಮೀ ಆಪ್ಟಿಕಲ್ ಫೈಬರ್ ಅಳವಡಿಸಿದ್ದು ೧೫ ಎಎಂಪಿಆರ್ ಸಿಸಿ ಟಿವಿ ಜೋಡಿಸಲಾಗಿದೆ. ಇದರಿಂದ ಒಟ್ಟಾರೆ ೪೫ ಸ್ಥಳಗಳನ್ನು ಕುಳಿತಲ್ಲಿಯೇ ನಿಗಾವಹಿಸಲಾಗುತ್ತಿದೆ. ಗದಗ ಬೆಟಗೇರಿ ನಗರಕ್ಕೆ ಬರುವ ಪ್ರತಿ ವಾಹನದ ಚಲನವಲನಗಳನ್ನು, ಮಾರ್ಗಗಳನ್ನು ವೀಕ್ಷಣೆ ಮಾಡಲು ಸಿಸಿ ಟಿವಿ ಕ್ಯಾಮರಾ ಅಳವಡಿಕೆ ಮಾಡಲಾಗಿದ್ದು ಇವುಗಳು ೩೬೦ ಡಿಗ್ರಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಇನ್ನೂ ಸೂಕ್ಷ್ಮ ಅತಿಸೂಕ್ಷ್ಮ ಸ್ಥಳಗಳನ್ನು ಗುರುತಿಸಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ಕ್ರ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ನಗರೋತ್ತಾನ,ಶಾಸಕರ ಅನುದಾನ, ಪ್ರವಾಸೋದ್ಯಮ ಇಲಾಖೆ, ನಗರಸಭೆಯಿಂದ ಅಗತ್ಯದ ಹಣಕಾಸು ಒದಗಿಸಲಾಗುವುದು. ಈಗಾಗಲೇ ಈ ಯೋಜನೆಗೆ ೧.೫೦ ಕೋಟಿ ವ್ಯಯಿಸಲಾಗಿದೆ. ಹೆಚ್ಚುವರಿಯಾಗಿ ಅಗತ್ಯವಿರುವ ೧.೫೦ ಕೋಟಿ ರೂ. ಅನುದಾನವನ್ನು ಶೀಘ್ರವೇ ನೀಡಿ ಕಾಮಗಾರಿ ಪೂರ್ಣಗೊಳಿಸಲಾಗುವುದು. ಇದರಿಂದ ನಗರದಲ್ಲಿ ಶಾಂತಿ ಸುವ್ಯವಸ್ಥೆ , ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಬೀಳಲಿದೆ ಎಂದರು.

ಥರ್ಡ ಐ ಯೋಜನೆಯನ್ನು ಬೆಂಗಳೂರು ಹೊರತುಪಡಿಸಿದರೆ ಗದಗನಲ್ಲಿಯೇ ಆರಂಭಿಸುತ್ತಿರುವುದು ವಿಶೇಷವಾಗಿದೆ. ಈ ಯೋಜನೆಯ ಅನುಷ್ಟಾನಗೊಳಿಸುವಲ್ಲಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿಗಳ, ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್, ಅವರ ಶ್ರಮ ಹಾಗೂ ಸಹಕಾರ ನಿರಂತರವಾಗಿದೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಬಿ.ಎಸ್. ನೇಮಗೌಡ, ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ, ವಾರ್ತಾಧಿಕಾರಿ ವಸಂತ ಬಿ ಮಡ್ಲೂರ ಉಪಸ್ಥಿತರಿದ್ದರು

Related posts

ಆಗಸ್ಟ್ 1ರಂದು ವ್ಯಸನಮುಕ್ತ ದಿನಾಚರಣೆ

satyadarshana

ವಿಶ್ವ ಬ್ಯಾಂಕ್ ನೆರವಿನ ರೀವರ್ಡ್ ಯೋಜನೆ: ಸಮರ್ಪಕ ಅನುಷ್ಠಾನಕ್ಕೆ ಸಲಹೆ

satyadarshana

ಮಾರ್ಚ್ 28 ರಿಂದ ಸಾರಿಗೆ ನೌಕರರ ಅನಿರ್ದಾಷ್ಟವಾದಿ ಉಪವಾಸ ಸತ್ಯಾಗ್ರಹ.

satyadarshana

Leave a Comment