ಕೊಪ್ಪಳ: ಗ್ಯಾರಂಟಿ ಯೋಜನೆಯಿಂದ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿ ಆಗಿದ್ದು, ಕುರಿ ಸತ್ತರೆ ಪರಿಹಾರ ನೀಡುತ್ತಿಲ್ಲ. ಕಾರವಾರ ಡಿಸಿ ಕಾರಿಗೆ ಡೀಸೆಲ್ ಹಾಕಲು ಹಣ ಇಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದರು.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕರಿಗೆ ನೀಡಲು ಸರ್ಕಾರದ ಬಳಿ ಅನುದಾನ ಇಲ್ಲ. ಶಾಸಕರಿಗೆ ಅನುದಾನ ನೀಡಿದರೆ ಮಾತ್ರ, ಅವರು ಕ್ಷೇತ್ರದಲ್ಲಿ ಕೆಲಸ ಮಾಡಲು ಸಾಧ್ಯ. ಇದರಿಂದ ಶಾಸಕರಿಗೆ ಗ್ರಾಮೀಣ ಪ್ರದೇಶಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ರೈತರ ಪಂಪ್ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಲು ಆಗುತ್ತಿಲ್ಲ. ಇದರಿಂದ ಶಾಸಕರಿಗೆ ಅಸಮಾಧಾನ ಹೆಚ್ಚಾಗಿದೆ. ನಮ್ಮ ಪಾರ್ಟಿ ಒಡೆಯಬೇಕು ಎನ್ನುವ ಇವರದ್ದೇ ಪಾರ್ಟಿ ಒಡೆದು ಹೋಗುತ್ತೆ ಎಂದು ಆಕ್ರೋಶ ವ್ಯಕ್ತಪಡಿಸಿದರು
