Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಕ್ರೂರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ನೇಹಾ ಸಾವಿನ ಬಗ್ಗೆ ಧ್ರುವ ಸರ್ಜಾ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಹುಬ್ಬಳ್ಳಿ ಕಾಲೇಜು ನಡೆದ ಕಾರ್ಪೊರೇಟರ್ ಮಗಳ ಬರ್ಬರ ಹತ್ಯೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ವಿದ್ಯಾರ್ಥಿನಿ ನೇಹಾ ಹಿರೇಮಠ (ನೇಹಾ ಹಿರೇಮಠ) ಹತ್ಯೆಗೆ ಇದೀಗ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಇದೀಗ ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ (ಧ್ರುವ ಸರ್ಜಾ) ಪ್ರತಿಕ್ರಿಯೆ. ಕ್ರೂರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ನೇಹಾ ಪರ ಧ್ರುವ ಧ್ವನಿಯೆತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನೇಹಾ ಸಾವಿನ ಬಗ್ಗೆ ಧ್ರುವ ಸರ್ಜಾ ರಿಯಾಕ್ಟ್ ಮಾಡಿದ್ದಾರೆ

ಸಹೋದರಿ ನೇಹಾ ಹಿರೇಮಠ್ ಹತ್ಯೆ ಅತ್ಯಂತ ಹೀನ ಕೃತ್ಯ. ಕ್ಯಾಂಪಸ್‌ನಲ್ಲಿ ಹತ್ಯೆ ನಿಜಕ್ಕೂ ಆತಂಕ ಮೂಡಿಸುತ್ತದೆ. ಸರ್ಕಾರ ಶೀಘ್ರಗತಿಯಲ್ಲಿ ನ್ಯಾಯಾಲಯದಲ್ಲಿ ಈ ಕೇಸ್ ತೀರ್ಪು ಬರಲು ವರ್ಗಾಯಿಸಬೇಕು. ಅಲ್ಲದೆ ಇದನ್ನೆಲ್ಲಾ ತನಿಖೆ ನಡೆಸಿ ಅಪರಾಧಿಗೆ ಅತ್ಯುಗ್ರ ಶಿಕ್ಷೆ ನೀಡಬೇಕು ಎಂದು ನಟ ಧ್ರುವ ಸರ್ಜಾ ಹೇಳಿದ್ದಾರೆ. ಕ್ರೂರಿಗೆ ಶಿಕ್ಷೆಯಾಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಏ.18ರಂದು ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಕಾರ್ಪೊರೇಟರ್ ಅವರ ಪುತ್ರಿ ಹತ್ಯೆ ನಡೆದಿತ್ತು. ನೇಹಾ ಹತ್ಯೆಗೈದ ಆರೋಪಿ ಫಯಾಜ್ ಬಂಧನವಾಗಿದೆ. ನಗರದ ವಿದ್ಯಾರ್ಥಿಗಳು ನ್ಯಾಯಕ್ಕಾಗಿ ಇದ್ದಾರೆ.

Related posts

ಗೋಲ್ 2.0 ಕಾರ್ಯಕ್ರಮ :ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ನೋಂದಣಿಗೆ ಅವಕಾಶ

satyadarshana

ಕಾಂಗ್ರೆಸ್‍ನ ಪ್ರಭಾವಿ ನಾಯಕರ ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿದ ಬಿಜೆಪಿ

satyadarshana

ಯಲಬುರ್ಗಾ ಕ್ಷೇತ್ರದ ಮೇಲೆ ಶ್ರೀನಾಥ ಕಣ್ಣು!

satyadarshana

Leave a Comment