Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಎಸ್ ಜಿ ವಿ ಆರ್ ಶಾಲೆ ಎಸ್ ಎಲ್ ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆ

ವಿದ್ಯಾನಗರ : ಶ್ರೀ ಶಾರದಾ ವಿದ್ಯಾ ಸಂಸ್ಥೆಯ ಎಸ್‌ಜಿವಿಆರ್ ಆಂಗ್ಲ ಮಾಧ್ಯಮ ಶಾಲೆ 2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಉತ್ತಮ ಸಾಧನೆಗೈದಿದ್ದಾರೆ.

ಒಟ್ಟು 85 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು,

ಕು. ಅಮೂಲ್ಯ ತಂ/ ಉಜ್ಜನಗೌಡ 625ಕ್ಕೆ 605 ಅಂಕಗಳನ್ನು ಗಳಿಸಿ ಶಾಲೆಗೆ ಕೀರ್ತಿ ತಂದಿರುತ್ತಾರೆ. 18 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಶೇಖಡಾ 95ರಷ್ಟು ಅಂಕಗಳನ್ನು ಗಳಿಸಿ ಶಾಲೆಯ ಕೀರ್ತಿ ಪತಾಕೆಯನ್ನು ಹಾರಿಸಿದ್ದಾರೆ. 65ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಈ ಸಂದರ್ಭದಲ್ಲಿ ಶಾರದಾ ವಿದ್ಯಾ ಸಂಸ್ಥೆಯ ಅಧ್ಯಕ್ಷರು ಸಂಕುರಾತ್ರಿ ಪ್ರಸಾದ್ ರವರು ಮಕ್ಕಳ ಫಲಿತಾಂಶವನ್ನು ವೀಕ್ಷಿಸಿ ಮಕ್ಕಳು ಪಟ್ಟ ಪರಿಶ್ರಮ ಇದಕ್ಕೆ ಎಲ್ಲಾ ಶಿಕ್ಷಕರ ಸಹಕಾರ ಮತ್ತು ಪಾಲಕರ ಪ್ರೋತ್ಸಾಹವನ್ನು ಕೊಂಡಾಡಿದರು.

ಸಂಸ್ಥೆಯ ಕಾರ್ಯದರ್ಶಿಗಳಾದ ಆರ್ ರಾಜಶೇಖರ್ ಅವರು ಅತಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಿದರು ಇದಕ್ಕೆಲ್ಲ ಶ್ರಮಿಸಿದ ಶಿಕ್ಷಕರು ಪಾಲಕರನ್ನು ಪ್ರಶಂಸಿದರು ಈ ಸಂದರ್ಭದಲ್ಲಿ ಸಂಸ್ಥೆಯ ಸಹಕಾರ್ಯದರ್ಶಿಗಳು ಕೆ ಕೋಟೇಶ್ವರರಾವ್ ಖಜಾಂಚಿಗಳಾದ ಎಂ. ಸತ್ಯನಾರಾಯಣ, ಗೌರವ ಅಧ್ಯಕ್ಷರಾದ ಟಿ ವಿ ಸತ್ಯನಾರಾಯಣ ಸಂಸ್ಥೆಯ ಸದಸ್ಯರುಗಳಾದ ಎಸ್ ವೆಂಕಟೇಶ್ವರ್‌ರಾವ್, ಟಿ.ವಿ. ಸುಬ್ಬರಾವ್, ಕೆ ಬಿ ಜಿ ಕೆ ರೆಡ್ಡಿ ಸರ್ವ ಸದಸ್ಯರು ಎಲ್ಲ ಮಕ್ಕಳನ್ನು ಅಭಿನಂದಿಸಿದ್ದಾರೆ.

ಸಂಸ್ಥೆಯ ಆಡಳಿತಾಧಿಕಾರಿಗಳಾದಂತಹ ಶ್ರೀ ವೈ ಸುದರ್ಶನ್‌ರಾವ್ ಹಾಗೂ ಶೈಕ್ಷಣಿಕ ಪ್ರಗತಿ ಪರಿಶೀಲಕರಾದ ಶ್ರೀ ಪಂಪನಗೌಡರು ಮುಖ್ಯೋಪಾಧ್ಯಾಯರಾದ ಶ್ರೀಮತಿ ಉದಯಶ್ರೀ, ಮತ್ತು ಎಲ್ಲಾ ಶಿಕ್ಷಕ/ಶಿಕ್ಷಕೇತರ ಸಿಬ್ಬಂದಿ ಎಲ್ಲಾ ಮುದ್ದು ಮಕ್ಕಳನ್ನು ಅಭಿನಂದಿಸಿದ್ದಾರೆ.

Related posts

ಅಪ್ಪನ ಸಮಾಧಿಯ ಪಕ್ಕದಲ್ಲಿಯೇ ಮಗನ ಅಂತ್ಯಸಂಸ್ಕಾರ * ಕಂಠೀರವ ಸ್ಟುಡಿಯೋ ಆವರಣದಲ್ಲಿ ಪುನೀತ್ ರಾಜ್‌ಕುಮಾರ್ ಅಂತ್ಯಸಂಸ್ಕಾರ

satyadarshana

ಪತ್ತೆಯಾದ ಕಾರಿನ ಡಿಕ್ಕಿಯಲ್ಲಿ ರಕ್ತದ ಕಲೆಗಳು CPY ಬಾವ ಮಹದೇವಯ್ಯ ಕಿಡ್ನಾಪ್ ಅಪಹರಣ…

satyadarshana

ಪಂಚಾಯತ್ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ; ಕಾರ್ಯಕರ್ತರ ಜೊತೆ ಸಭೆ, : ಡಿ ಕೆ ಶಿವಕುಮಾರ್

satyadarshana

Leave a Comment