Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ಮೇಕೆದಾಟು ಯೋಜನೆ ಜಾರಿ ಬಗ್ಗೆ ಮನವರಿಕೆ ಮಾಡಿದ್ದೇವೆ; ಶೀಘ್ರವೇ ಡಿಪಿಆರ್​ಗೆ ಮಾನ್ಯತೆ: ಬಸವರಾಜ ಬೊಮ್ಮಾಯಿ

ದೆಹಲಿ: ಮೇಕೆದಾಟು ಕುಡಿಯುವ ನೀರಿನ ಯೋಜನೆ ಜಾರಿ ವಿಚಾರವಾಗಿ ಸುಪ್ರೀಂಕೋರ್ಟ್ ಆದೇಶ ಮುಂದಿಟ್ಟು ಮನವರಿಕೆ ಮಾಡಿಕೊಟ್ಟಿದ್ದೇವೆ. ಕೇಂದ್ರ ಜಲಶಕ್ತಿ ಸಚಿವರಿಗೆ ಈ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಶೀಘ್ರದಲ್ಲೇ ಡಿಪಿಆರ್​ಗೆ ಮಾನ್ಯತೆ ಸಿಗಲಿದೆ ಎಂದು ನವದೆಹಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಭೇಟಿ ಸಮಯ ಕೇಳಿದ್ದೇನೆ. ಅವರಿಗೆ ವೈಯಕ್ತಿಕ ಕೆಲಸವಿರುವ ಹಿನ್ನೆಲೆ ಮುಂದಿನ ವಾರ ಭೇಟಿಯಾಗಲು ತಿಳಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.ಕೇಂದ್ರ ಸಚಿವರನ್ನು ಭೇಟಿಯಾದ ಬಸವರಾಜ ಬೊಮ್ಮಯಿ

ಬುಧವಾರ ದೆಹಲಿಗೆ ಆಗಮಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಕೃಷಿ ಸಚಿವ ತೋಮರ್ ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ತೋಮರ್​ ಜೊತೆಗೆ ಸಿಎಂ ಮಾತುಕತೆ ನಡೆಸಿದ್ದಾರೆ. ಈ ವೇಳೆ, ಶೋಭಾ ಕರಂದ್ಲಾಜೆ ಹಾಗೂ ಜಲಸಂಪನ್ಮೂಲ ಖಾತೆ ಸಚಿವ ಕಾರಜೋಳ ಉಪಸ್ಥಿತರಿದ್ದರು. ಬಳಿಕ, ಕೇಂದ್ರ ಜಲಶಕ್ತಿ ಸಚಿವರನ್ನು ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿದ್ದಾರೆ. ದೆಹಲಿಯಲ್ಲಿ ಗಜೇಂದ್ರಸಿಂಗ್​ ಶೇಖಾವತ್ ಭೇಟಿಯಾಗಿ, ಮಹದಾಯಿ, ಮೇಕೆದಾಟು ಯೋಜನೆ ಕುರಿತು ಚರ್ಚೆ ನಡೆಸಿದ್ದಾರೆ. ಬಳಿಕ, ಸಿಎಂ ಬಸವರಾಜ ಬೊಮ್ಮಾಯಿ ಬಿಜೆಪಿ ನಾಯಕ, ಗೃಹ ಸಚಿವ ಅಮಿತ್​ ಶಾ ಭೇಟಿಯಾಗಿದ್ದಾರೆ. ದೆಹಲಿಯ ನಾರ್ತ್ ಬ್ಲಾಕ್​ನಲ್ಲಿನ ಕಚೇರಿಯಲ್ಲಿ ಅಮಿತ್ ಶಾರನ್ನು ಭೇಟಿ ಮಾಡಿದ್ದಾರೆ.

Related posts

ರಾಜಕಾರಣಕ್ಕೆ ಪೂರ್ಣ ವಿರಾಮ ಇಲ್ಲ : ಪ್ರಧಾನಿ ನರೇಂದ್ರ ಮೋದಿ

satyadarshana

ಕೆರೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಎಚ್. ಕೆ. ಪಾಟೀಲ ಅವರಿಂದ ಭೂಮಿ ಪೂಜೆ

satyadarshana

ಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟದ ಜತೆಗೆ ಮೊಟ್ಟೆ, ಬಾಳೆಹಣ್ಣು ಮತ್ತು ಶೇಂಗಾಚಿಕ್ಕಿ.

satyadarshana

Leave a Comment