Satya Darshana
ಬಿಸಿ ಬಿಸಿ ಸುದ್ದಿ
ರಾಜ್ಯ

ಕಲಬುರಗಿಯಲ್ಲಿ ಮೈತ್ರಿಗೆ ಸಿದ್ದರಾಮಯ್ಯ ವಿರೋಧ- ಮಾಜಿ ಸಿಎಂ ಲೆಕ್ಕಾಚಾರ ಏನು?

ಬೆಂಗಳೂರು: ಕಲಬುರಗಿಯಲ್ಲಿ ಮೈತ್ರಿಗೆ ಮಾಜಿ ಮುಖ್ಯ. ಮಂತ್ರಿ   ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದುತ್ತಿದ್ದು, ಜಾತ್ಯತೀತ   ಸಿದ್ಧಾಂತಕ್ಕೆ ಪೆಟ್ಟು ಬೀಳುವ ಲೆಕ್ಕಾಚಾರವಿದೆ.
ಒಂದು ಮಹಾನಗರ ಪಾಲಿಕೆ ಅಧಿಕಾರಕ್ಕಾಗಿ ಜೆಡಿಎಸ್ ಜೊತೆ ಕೈಕೋಡಿಸದೆ ಸುಮ್ಮನಿರುವುದು ಒಳಿತು. ಆಗ ಜೆಡಿಎಸ್ ಸಹಜವಾಗಿಯೆ ಬಿಜೆಪಿ ಜೊತೆ ಕೈಜೋಡಿಸಿ ಅಧಿಕಾರ ಹಿಡಿಯಲು ಮುಂದಾಗುತ್ತೆ. ಮೊದಲೇ ಜೆಡಿಎಸ್ ಬಗ್ಗೆ ರಾಜ್ಯದ ಅಲ್ಪ ಸಂಖ್ಯಾತ ಸಮುದಾಯಕ್ಕೆ ಸಾಕಷ್ಟು ಅನುಮಾನಗಳಿವೆ. ಅದರಲ್ಲೂ ಬಿಜೆಪಿಯ ಬಿ ಟೀಮ್ ನಂತೆ ವರ್ತಿಸಿ ಈಗಾಗಲೇ ಅಲ್ಪಸಂಖ್ಯಾತರ ವಿಶ್ವಾಸ ಕಳೆದುಕೊಂಡಿದೆ. ಈಗಲೂ ಮತ್ತೊಮ್ಮೆ ಬಿಜೆಪಿ ಜೊತೆ ಹೋಗಲಿ ಅಧಿಕಾರ ನಡೆಸಲಿ. ಆಗ ಸಹಜವಾಗಿಯೆ ಮುಸ್ಲಿಂ ಮತಗಳು ಜೆಡಿಎಸ್ ನಿಂದ ಮತ್ತಷ್ಟು ದೂರವಾಗುತ್ತೆ. ಹೀಗೆ ಕೈ ಪಾಳಯಕ್ಕೆ ಅಲ್ಪ ಸಂಖ್ಯಾತ ಮತ ಗುಡ್ಡೆ ಹಾಕುವ ತಂತ್ರ ಸಿದ್ದರಾಮಯ್ಯನವರದು ಎನ್ನಲಾಗುತ್ತಿದೆ.
ಆದ್ದರಿಂದ ಕಲಬುರಗಿ ಪಾಲಿಕೆ ವಿಚಾರದಲ್ಲಿ ಕಾಂಗ್ರೆಸ್ ಮೌನವಾಗಿರವುದು ಒಳಿತು. ಬಿಜೆಪಿ ಜೆಡಿಎಸ್ ಮೈತ್ರಿಯಾದರೆ ಆಗಲಿ ಜೆಡಿಎಸ್ ಪಾಲಿನ ಅಲ್ಪ ಸಂಖ್ಯಾತ ವೋಟ್ ಬ್ಯಾಂಕ್ ಇದರಿಂದ ಛಿದ್ರವಾಗುತ್ತೆ. ಕಾಂಗ್ರೆಸ್ ಪರವಾದ ಅಲ್ಪಸಂಖ್ಯಾತರ ಒಲವು ಇನ್ನಷ್ಟು ಹೆಚ್ಚುತ್ತೆ ಅನ್ನೋದು ಸಿದ್ದರಾಮಯ್ಯ ಲೆಕ್ಕಾಚಾರ ಎನ್ನಲಾಗುತ್ತಿದೆ.

 

 

 

 

Related posts

ಚರ್ಚೆ: ಅಖಂಡ ಕರ್ನಾಟಕದ ಅನಿವಾರ್ಯ, ಉತ್ತರ ಕರ್ನಾಟಕ ಪ್ರತ್ಯೇಕತೆ ಕೂಗು

cradmin

ಮಧ್ಯಾಹ್ನ 3ಗಂಟೆಗೆ ಕ್ಯಾಂಡಿಯಲ್ಲಿ ಸೆಣೆಸಾಡಲಿವೆ ಭಾರತ-ಪಾಕ್​..!

satyadarshana

ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ: ಮಾಜಿ ಸಚಿವ ಕಳಕಪ್ಪ ಬಂಡಿ

satyadarshana

Leave a Comment