Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಬಸವರಾಜ್ ರಾಯರೆಡ್ಡಿ-ಹಾಲಪ್ಪ ಆಚಾರ್ ಶೀತಲ ಸಮರ; ಪೊಲೀಸರ ಮೇಲೆ ಸಿಟ್ಟು ಮಾಡ್ಕೊಂಡ ಹಾಲಪ್ಪ ಏನ್ಮಾಡಿದರು!?

ಸುದ್ದಿಜಾಲ  ಸತ್ಯದರ್ಶನ

ಕೊಪ್ಪಳ:            ಅವರು ಹಾಲಪ್ಪ ಆಚಾರ್, ಸಚಿವರು! ಆದರೆ ಪೊಲೀಸರು ಮಾಜಿ ಸಚಿವರೊಬ್ಬರಿಗೆ ಭದ್ರತೆ ನೀಡಿದರು ಎಂದು ಸಿಟ್ಟು ಮಾಡಿಕೊಂಡು, ಸೆಡವಿನಿಂದ ತಾವು ನಡೆದಿದ್ದೇ ದಾರಿ ಎಂದು ಸಚಿವರಾದರೂ… ಪೊಲೀಸ್​ ಭದ್ರತೆ ಪಡೆಯದೆ ಕ್ಷೇತ್ರದಲ್ಲಿ ಓಡಾಡುತ್ತಿದ್ದಾರೆ. ಇದರಿಂದ, ಭದ್ರತೆ ನೀಡಬೇಕಾದ ಕೊಪ್ಪಳ ಪೊಲೀಸರಿಗೆ ಪೀಕಲಾಟಕ್ಕೆ ಇಟ್ಕೊಂಡಿದೆ.

ಪೊಲೀಸರಿಗೆ ಇಲಾಖೆಯಲ್ಲಿ ಮಾಡೋಕೆ ಬೇಕಾದಷ್ಟು ಕೆಲಸ ಇದೆ. ನಾನ್ಯಾಕೆ ಅವರ ಉದ್ಯೋಗ ಕೆಡಸಲಿ. ಪೊಲೀಸರಿಗೆ ಇಲಾಖೆಯಲ್ಲಿ ಅವರ ಕೆಲಸ ಮಾಡೋಕೆ ಆಗ್ತಿಲ್ಲ. ಇಲಾಖೆಯಲ್ಲಿ ನ್ಯೂನ್ಯತೆಗಳಿವೆ ಎಂದಿರುವ ಹಾಲಪ್ಪ ಆಚಾರ್, ಇದರ ಮಧ್ಯೆ ನಮ್ದೊಂದು ಜಾತ್ರೆ, ಆಡಂಬರ ಯಾಕೆ ಬೇಕು? ನನಗೆ ಅದೆಲ್ಲಾ ಬೇಡಾ ಎಂದಿದ್ದಾರೆ.

ಪೊಲೀಸರಿಗೆ ಇಲಾಖೆಯಲ್ಲಿ ಮಾಡೋಕೆ ಬೇಕಾದಷ್ಟು ಕೆಲಸ ಇದೆ. ನಾನ್ಯಾಕೆ ಅವರ ಉದ್ಯೋಗ ಕೆಡಸಲಿ. ಪೊಲೀಸರಿಗೆ ಇಲಾಖೆಯಲ್ಲಿ ಅವರ ಕೆಲಸ ಮಾಡೋಕೆ ಆಗ್ತಿಲ್ಲ. ಇಲಾಖೆಯಲ್ಲಿ ನ್ಯೂನ್ಯತೆಗಳಿವೆ ಎಂದಿರುವ ಹಾಲಪ್ಪ ಆಚಾರ್, ಇದರ ಮಧ್ಯೆ ನಮ್ದೊಂದು ಜಾತ್ರೆ, ಆಡಂಬರ ಯಾಕೆ ಬೇಕು? ನನಗೆ ಅದೆಲ್ಲಾ ಬೇಡಾ ಎಂದಿದ್ದಾರೆ.

ನಾನು ಹಿಂದೆ ಯಾವತ್ತೂ ಪೊಲೀಸರನ್ನ ಕಟ್ಟಿಕೊಂಡು ಓಡಾಡಿಲ್ಲ. ನಾನು ಜನರ ಮಧ್ಯೆ ಇರೋನು, ಮಂತ್ರಿ ಆದ ಮೇಲೆ ಹೆಚ್ಚಿಗೆ ಭದ್ರತೆ ನನಗೆ ಬೇಡಾ. ಪೊಲೀಸರ ಉದ್ಯೋಗ ಹಾಳಾಗತ್ತೆ ಎಂದು ಹಾಲಪ್ಪ ಆಚಾರ್ ಕ್ಲುಪ್ತವಾಗಿ ಹೇಳಿದ್ದಾರೆ.

ನಾನು ನಿರ್ಭಯದಿಂದ ಓಡಾಡ್ತೀನಿ ಎಂದು ಹಾಲಪ್ಪ ಆಚಾರ್ ಪೊಲೀಸ್ ಇಲಾಖೆ ಮೇಲೆ ಯಾಕೆ ಸಿಟ್ಟಾದ್ರು ಎಂದು ಕೆದಕಿದಾಗ… ಸದರಿ ಪೊಲೀಸರು ಮಾಜಿ ಸಚಿವ ಬಸವರಾಜ್ ರಾಯರೆಡ್ಡಿಗೆ ಭದ್ರತೆ ನೀಡಿದ್ದಾರೆ. ಅದನ್ನೇ ಮುಂದಿಟ್ಟುಕೊಂಡು ಇದೀಗ ಹಾಲಿ ಸಚಿವ ಹಾಲಪ್ಪ ಆಚಾರ್ ಅವರು ಪೊಲೀಸರನ್ನು ಬಿಟ್ಟು ಓಡಾಡುತ್ತಿದ್ದಾರೆ. ಇದರಿಂದ ಬಸವರಾಜ್ ರಾಯರೆಡ್ಡಿ ಮತ್ತು ಹಾಲಪ್ಪ ಆಚಾರ್ ನಡುವಣ ಶೀತಲ ಸಮರ ಮತ್ತೊಮ್ಮೆ ಜಗಜ್ಜಾಹೀರಾಗಿದೆ!

Related posts

ಕೃಷ್ಣ-ರಾಧೆ ವೇಷದಲ್ಲಿ ಮಿಂಚಿದ ಪುಟಾಣಿಗಳು

satyadarshana

ಆಕ್ಸಿಜನೈಸ್ಡ್ 100 ಹಾಸಿಗೆಗಳ ಮಾಡ್ಯುಲಸ್‌ ಆಸ್ಪತ್ರೆ ತಲೆ ಎತ್ತಲಿದೆ

satyadarshana

ಅನ್ನದಾನ ಸ್ವಾಮೀಜಿಗಳು ಹೃದಯ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಲಿಂಗೈಕ್ಯ.

satyadarshana

Leave a Comment