Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ರಾಜಧಾನಿಯಲ್ಲಿ‌ ನಡೆದಿದ್ದ ‘ಬೃಹತ್ ಐಟಿ ದಾಳಿ‌’ಯಲ್ಲಿ ಬಯಲಾದ ಅಕ್ರಮ ಎಷ್ಟು ಗೊತ್ತೇ.?

ಬೆಂಗಳೂರು: ರಾಜಧಾನಿಯಲ್ಲಿ‌ ನಡೆದಿದ್ದ ಬೃಹತ್ ಐಟಿ ದಾಳಿ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಇಲಾಖೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ನಾಲ್ಕು ರಾಜ್ಯಗಳ 47 ಕಡೆಗಳಲ್ಲಿ ನಡೆಸಿದ ಐಟಿ ದಾಳಿಯಲ್ಲಿ 750 ಕೋಟಿ ಆಕ್ರಮ‌ ಆದಾಯ ಪತ್ತೆಯಾಗಿದ್ದು ಇದರಲ್ಲಿ ಒಟ್ಟು 487 ಕೋಟಿ ಆಕ್ರಮ‌ ನಡೆದಿರುವುದಾಗಿ ಒಪ್ಪಿಕೊಂಡಿದ್ದಾರೆ.

ಹೈವೆ ಪ್ರಾಜೆಕ್ಟ್, ಹಾಗೂ ನೀರಾವರಿ ಇಲಾಖೆ ಸಂಬಂಧ ದಾಳಿ ನಡೆದಿತ್ತು.. ದಾಳಿಯಲ್ಲಿ 4.69 ಕೋಟಿ ನಗದು, 8.62 ಕೋಟಿ ಮೌಲ್ಯದ ಚಿನ್ನಾಭರಣ ಹಾಗೂ 29.83 ಕೋಟಿ ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು.

ಬೋಕಸ್ ದಾಖಲೆಗಳನ್ನು ಸೃಷ್ಟಿಸಿಕೊಂಡು ಸರ್ಕಾರದ‌ ಗುತ್ತಿಗೆ‌ ಪಡೆಯುತ್ತಿದ್ದ ಕಂಪನಿಗಳು ಕಾರ್ಮಿಕರಿಗೆ ನೀಡಿದ‌ ಹಣದಲ್ಲಿ ಅವ್ಯವಹಾರ ನಡೆಸಿದ್ದವು ಎಂಬ ಆರೋಪ ಕೇಳಿಬಂದಿದೆ. ಒಂದು ಗುತ್ತಿಗೆಯನ್ನು ಕಂಪನಿ 40 ಮಂದಿಗೆ ಸಬ್ ಕಂಟ್ರಾಕ್ಟರ್​ಗಳಿಗೆ ನೀಡಿದೆ ಎನ್ನಲಾಗಿದೆ. ತನಿಖೆ ವೇಳೆ ಪ್ರತಿಯೊಬ್ಬರೂ ದಾಖಲೆಗಳನ್ನು ತಿದ್ದಿ ಗುತ್ತಿಗೆ ಪಡೆದಿರುವುದರ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ ಎಂದು ಐಟಿ ಇಲಾಖೆ ಹೇಳಿದೆ.

Related posts

ಸತ್ಯದರ್ಶನ ಕನ್ನಡ ದಿನಪತ್ರಿಕೆ ಮಂಗಳವಾರ 10. 2024

satyadarshana

ಬಸವರಾಜ್ ರಾಯರೆಡ್ಡಿ-ಹಾಲಪ್ಪ ಆಚಾರ್ ಶೀತಲ ಸಮರ; ಪೊಲೀಸರ ಮೇಲೆ ಸಿಟ್ಟು ಮಾಡ್ಕೊಂಡ ಹಾಲಪ್ಪ ಏನ್ಮಾಡಿದರು!?

satyadarshana

ಸ್ವ ಸಹಾಯ ಸಂಘಗಳಿಂದ ಮಹಿಳೆಯರ ಸ್ವಾವಲಂಬಿ ಜೀವನ ಸಾಧ್ಯ- ಬಸವರಾಜ ಕಡಬಿನ.

satyadarshana

Leave a Comment