ಸತ್ಯ ದರ್ಶನ
ಹಾವೇರಿ: ಹಾನಗಲ್ ನಲ್ಲಿ ಮೂರು ದಿನಗಳ ಪ್ರಚಾರ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯರು ಗುರುವಾರದಿಂದ ಆರಂಭಿಸಿದ್ದು, ಈ ವೇಳೆ ಅಭಿವೃದ್ಧಿಯ ಮಂತ್ರ ಪಠಿಸಿ, ಮತಯಾಚಿಸಿದರು.
ಮಕರವಳ್ಳಿ ಮತ್ತು ಹೊಂಕಣ ಗ್ರಾಮಗಳಲ್ಲಿ ಸರಣಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದ ಬೊಮ್ಮಾಯಿಯವರು ಕಾಂಗ್ರೆಸ್ ಗುರಿಯಾಗಿರಿಸಿಕೊಂಡು, ಸಿಎಂ ಉದಾಸಿಯವರು ಈ ಕ್ಷೇತ್ರದಲ್ಲಿ ನಡೆಸಿದ ಅಭಿವೃದ್ಧಿ ಕಾರ್ಯಗಳನ್ನು ಸ್ಮರಿಸಿದರು.
ಉದಾಸಿ ಶಾಸಕರಾಗಿದ್ದ ಸಂದರ್ಭದಲ್ಲಿ ಕ್ಷೇತ್ರದಲ್ಲಿ ನಡೆಸಲಾಗಿದ್ದ ನೀರಾವರಿ ಯೋಜನೆಗಳು ಸೇರಿದಂತೆ ಇನ್ನಿತರೆ ಅಭಿವೃದ್ಧಿ ಯೋಜನೆಗಳನ್ನು ಹಿಡಿದ ಸಿಎಂ ಬೊಮ್ಮಾಯಿಯವರು ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ್ ಪರ ಮತ ನೀಡುವತೆ ಮನವಿ ಮಾಡಿಕೊಂಡರು
