Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ನಿನ್ನ ಜಾಗಕ್ಕೆ ನಾನು ಬರುತ್ತೇನೆ’ ಎಂದು ರಾಘಣ್ಣ ಕಂಬನಿ.

ಸತ್ಯದರ್ಶನ

ಬೆಂಗಳೂರು :-‘ನೀವೆಲ್ಲರೂ ಸೇರಿ ನನಗೊಂದು ಸಹಾಯ ಮಾಡಿ. ನನ್ನನ್ನು ಕಳಿಸಿಕೊಟ್ಟು ಅವನನ್ನು ವಾಪಸ್​ ಕರೆಸಿಕೊಳ್ಳಿ ಪ್ಲೀಸ್. ಪುನೀತ್​ ಅವರನ್ನು ಹೂತ್ತಿಲ್ಲ, ಬಿತ್ತಿದ್ದೇವೆ. ಪುನೀತ್​ ರೀತಿ ಇರುವ ನೂರಾರು ಜನ ಹುಟ್ಟಿ ಬರುತ್ತಾರೆ. ಹುಟ್ಟುವಾಗ ನನ್ನ ತಮ್ಮನಾಗಿ ಬಂದ. ವಾಪಸ್​ ಹೋಗುವಾಗ ತಂದೆಯಾಗಿ ಹೋದ. ಹೇಗೆ ಬದುಕಬೇಕು ಎಂಬುದನ್ನು ನನಗೂ ಮತ್ತು ಶಿವಣ್ಣನಿಗೂ ತಿಳಿಸಿಕೊಟ್ಟು ಹೋದ. ದಯವಿಟ್ಟು ಬಂದುಬಿಡು ಕಂದಾ. ಇಷ್ಟು ದಿನ ಈ ನೋವನ್ನು ತಡೆದುಕೊಂಡಿದ್ದೆ.

ನಿನ್ನ ಜಾಗಕ್ಕೆ ನಾನು ಬರುತ್ತೇನೆ’ ಎಂದು ರಾಘಣ್ಣ ಕಂಬನಿ ಸುರಿಸಿದರು.

‘20 ದಿನ ಈ ನೋವನ್ನು ತಡೆದುಕೊಂಡಿದ್ದೆ. ನಾನು ಅತ್ತರೆ ಪುನೀತ್​ ಪತ್ನಿ ಮತ್ತು ಮಕ್ಕಳು ನೊಂದುಕೊಳ್ಳುತ್ತಾರೆ ಅಂತ ಸುಮ್ಮನಿದ್ದೆ. ಆದರೆ ಇಂದು ತಡೆದುಕೊಳ್ಳೋಕೆ ಆಗಲಿಲ್ಲ. ಅತ್ತು ಹಗುರಾಗುತ್ತೇನೆ. ಈ ನೋವು ಮರೆಯುವ ಶಕ್ತಿ ಕೊಡು ಅಂತ ದೇವರಲ್ಲಿ ಕೇಳಲ್ಲ. ಈ ನೋವಿನ ಜೊತೆಗೆ ಬದುಕುವ ಶಕ್ತಿ ಕೊಡು ಅಂತ ಕೇಳುತ್ತೇನೆ. ಅವನು ನನ್ನ ಎದೆಯೊಳಗೆ ಇದ್ದಾನೆ’ ಎಂದಿದ್ದಾರೆ ರಾಘವೇಂದ್ರ ರಾಜ್​ಕುಮಾರ್​.


ಅಕಾಲಿಕವಾಗಿ ವಿಧಿವಶರಾದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ರಾಜ್ಯ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರಕಟಿಸಿದೆ . ಅರಮನೆ ಮೈದಾನದಲ್ಲಿ ನಡೆದ ಪುನೀತ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಪುನೀತ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಘೋಷಿಸಿ , ರಾಜಕುಮಾರ್ ರಂತೆ ಪುನೀತ್ ಸ್ಮಾರಕ ನಿರ್ಮಿಸಿದ್ದಾರೆ .

ಬಳಿಕ ಮಾತನಾಡಿದ ಶಿವರಾಜ್​ಕುಮಾರ್​ ಕೂಡ ಕಣ್ಣೀರು ಸುರಿಸಿದರು. ಪುನೀತ್​ಗಾಗಿ ಹಾಡು ಹೇಳಿ ಗಾನ ನಮನ ಸಲ್ಲಿಸಿಸರು. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್​ ಮುಂತಾದ ರಾಜಕೀಯ ಗಣ್ಯರು ಆಗಮಿಸಿದ್ದರು. ಕನ್ನಡ ಚಿತ್ರರಂಗದ ಬಹುತೇಕ ಎಲ್ಲ ಸೆಲೆಬ್ರಿಟಿಗಳು ಭಾಗಿ ಆಗಿದ್ದರು. ತಮಿಳು ನಟರಾದ ವಿಶಾಲ್​, ಶರತ್​ ಕುಮಾರ್​ ಮುಂತಾದವರು ಪುನೀತ್​ಗೆ ನುಡಿ ನಮನ ಸಲ್ಲಿಸಿದರು.

Related posts

ಸೂಡಿಯ ನಾಗಕುಂಡ ಮೆಟ್ಟಿಲು ಬಾವಿಯ ದತ್ತು ಸ್ವೀಕಾರದ ಒಡಂಬಡಿಕೆ

satyadarshana

ಅಪರಿಚಿತ ವಾಹನ ಹರಿದು ವ್ಯಕ್ತಿ ಸಾವು

satyadarshana

ಕಾರಟಗಿ, ಕನಕಗಿರಿ, ಕುಕನೂರು, ಕೊಪ್ಪಳ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ. 6ರಿಂದ

satyadarshana

Leave a Comment