Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ಶಾಲಾ ಮಕ್ಕಳ ಪೋಷಕರು ಎರಡು ಡೋಸ್ ಕೊರೊನಾ ಲಸಿಕೆ ತೆಗೆದುಕೊಳ್ಳುವುದು ಕಡ್ಡಾಯ.

ಸತ್ಯದರ್ಶನ

ಬೆಂಗಳೂರು: ರಾಜ್ಯದಲ್ಲಿ ಓಮಿಕ್ರಾನ್ ರೂಪಾಂತರಿ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇನ್ಮುಂದೆ ಶಾಲಾ ಮಕ್ಕಳ ಪೋಷಕರಿಗೆ ಎರಡು ಡೋಸ್ ಲಸಿಕೆ ಕಡ್ಡಾಯಗೊಳಿಸಲಾಗಿದೆ. ಈ ಕುರಿತಾಗಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಗೃಹ‌ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಸಭೆಯ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್.‌ ಅಶೋಕ್, “ಅಧಿಕಾರಿಗಳು, ತಜ್ಞರು, ಸಚಿವರ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದಾರೆ.


ಓಮಿಕ್ರಾನ್ ಪತ್ತೆ ಹಿನ್ನೆಲೆಯಲ್ಲಿ ಈ ಬಗ್ಗೆ ಸಾಕಷ್ಟು ಚರ್ಚೆ ಆಗಿದೆ. ರಾಜ್ಯದಲ್ಲಿ ಎರಡು ಪ್ರಕರಣ ವರದಿಯಾದರೆ, ವಿಶ್ವದಲ್ಲಿ ಓಮಿಕ್ರಾನ್‌ನ 400 ಪ್ರಕರಣಗಳು ವರದಿ ಆಗಿವೆ. ಅಧಿಕೃತವಾಗಿ ಓಮಿಕ್ರಾನ್ ಬಗ್ಗೆ ಯಾವುದೇ ಅಧ್ಯಯನ ವರದಿ ಇಲ್ಲಿಯವರೆಗೆ ಬಂದಿಲ್ಲ‌. ಈ ಸೋಂಕು ತೀವ್ರ ಪ್ರಮಾಣದಲ್ಲಿ ಇಲ್ಲ.‌ ಯಾವುದೇ ಸಾವಿನ ಪ್ರಕರಣ ನಡೆದಿಲ್ಲ‌ ಎಂಬ ವರದಿ ಅನೌಪಚಾರಿಕವಾಗಿ ಬಂದಿದೆ.” ಎಂದರ

ಎರಡು ಪ್ರಕರಣಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿಗೆ ವಿಶ್ಲೇಷಣಾ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ. ಆದರೂ ಈ ಬಗ್ಗೆ ಹೆಚ್ಚು ಮುಂಜಾಗರೂಕತಾ ಕ್ರಮ ಕೈಗೊಳ್ಳಲಾಗುವುದು. ಏರ್‌ಪೋರ್ಟ್‌ನಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಳಕ್ಕೆ ಸೂಚನೆ ನೀಡಲಾಗಿದೆ.

ಪ್ರಮುಖ ಹೈಲೆಟ್ಸ್ ಗಳು.

*ಪರೀಕ್ಷೆ ನಂತರವೇ ಪ್ರಯಾಣಿಕರನ್ನು ಹೊರಗಡೆ ಬಿಡಲಾಗುತ್ತದೆ ಎಂದರು.

*ಸಿನಿಮಾ ಮಂದಿರ, ಮಾಲ್‌ಗಳಿಗೆ ಹೋಗಬೇಕಾದರೆ ಎರಡು ಡೋಸ್ ಕೊರೊನಾ ಲಸಿಕೆ ಪಡೆದುಕೊಂಡಿರುವುದು ಕಡ್ಡಾಯ

*ಶಾಲಾ ಮಕ್ಕಳ ಪೋಷಕರಿಗೆ ಎರಡು ಡೋಸ್‌ ಕೊರೊನಾ ಲಸಿಕೆ ಕಡ್ಡಾಯ

*ಶಾಲಾ -ಕಾಲೇಜುಗಳಲ್ಲಿ ಯಾವುದೇ ಸಭೆ ಸಮಾರಂಭಗಳಿಗೆ ಅವಕಾಶ ಇಲ್ಲ

*ಮದುವೆ ಸಮಾರಂಭಗಳಲ್ಲಿ ಅತಿಥಿಗಳ ಸಂಖ್ಯೆ 500ರ ಒಳಗೆ ಇರಬೇಕು

*ಪ್ರತಿದಿನ‌ ಒಂದು ಲಕ್ಷ ಸ್ಯಾಂಪಲ್‌ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲು ಸೂಚನೆ ನೀಡಲಾಗಿದೆ.

*ಆರೋಗ್ಯ ಇಲಾಖೆಗೆ ಆಕ್ಸಿಜನ್ ಬೆಡ್, ಐಸಿಯು ಬೆಡ್ ಸಿದ್ಧವಾಗಿಡಲು ಸೂಚನೆ ನೀಡಲಾಗಿದೆ

*ಆಕ್ಸಿಜನ್ ಲಭ್ಯತೆ, ಸಾಗಾಟ ಸಮಸ್ಯೆ‌ ಆಗದಂತೆ ನೋಡಿಕೊಳ್ಳಲು ರಚಿಸಲಾಗಿದ್ದ ಸಮಿತಿಗೆ ಮತ್ತೆ ಕಾರ್ಯಾರಂಭ ಮಾಡಲು ಆದೇಶ

*ರಾಜ್ಯಾದ್ಯಂತ ಕಂಟ್ರೋಲ್ ರೂಂ ಮತ್ತೆ ಆರಂಭಿಸಲು ಸೂಚನೆ ಹಾಗೂ ಬೇಕಾದ ಸಿಬ್ಬಂದಿ ವರ್ಗ ನೇಮಕ ಮಾಡಲು ಸೂಚನೆ

* ಔಷಧಿ ಸಮಸ್ಯೆಗಳು ಕೊರತೆ ಆಗದಂತೆ ಕ್ರಮ ಕೈಗೊಳ್ಳಲು ಸಲಹೆ

* ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು, ಎನ್‌ಸಿಬಿಎಸ್ ಪ್ರಯೋಗಾಲಯದ ವಿವರವಾದ ವರದಿ ಒದಗಿಸುವಂತೆ ಮನವಿ

*ಈಗ ವರದಿಯಾಗಿರುವ ಎರಡೂ ಪ್ರಕರಣಗಳ ಪರೀಕ್ಷಾ ವರದಿಯನ್ನು ವಿಶ್ಲೇಷಿಸಿ ಸಲಹೆ ನೀಡುವಂತೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರಿಗೆ ಸೂಚನೆ

*ವಿಮಾನ ನಿಲ್ದಾಣದಲ್ಲಿ ಪರೀಕ್ಷೆ ನಡೆಸಿ, ನೆಗೆಟಿವ್ ವರದಿ ಬಂದ ನಂತರವೇ ಹೊರಗೆ ಬಿಡಲಾಗುವುದು,

*ಪ್ರಯಾಣಿಕರ ಅನುಕೂಲಕ್ಕಾಗಿ ಪರೀಕ್ಷಾ ಯಂತ್ರಗಳನ್ನು ಹೆಚ್ಚುವರಿಯಾಗಿ ಅಳವಡಿಕೆ

Related posts

ಜನಸಾಮಾನ್ಯರ ರಕ್ಷಣೆ, ಶಾಂತಿ ಸುವ್ಯವಸ್ಥೆಯ ಹೊಣೆಗಾರಿಕೆಯಲ್ಲಿ . ಪೊಲೀಸರ ಪಾತ್ರ ಪ್ರಮುಖವಾಗಿದೆ > ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ

satyadarshana

ದಮ್ಮೂರ: ಶ್ರೀ ಭೀಮಾಂಬಿಕಾದೇವಿ ಮಠದಲ್ಲಿ ೩೭೨ ನೇ ಶಿವಾನುಭವ ಗೋಷ್ಠಿ 

satyadarshana

ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ನಿವಾಸಕ್ಕೆ ಮುತ್ತಿಗೆ ಹಾಕಿ.ಭಾರಿ ಹಣ ವಶಕ್ಕೆ ಪಡೆದ ಪ್ರತಿಭಟನಾಕಾರರು

satyadarshana

Leave a Comment