Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿ

ಒಬ್ಬರೇ ಸದಸ್ಯರಿಗೆ ಎರಡು ರೀತಿಯಲ್ಲಿ ದೃಢೀಕರಣ ನೀಡಿದ ಆರೋಪದಲ್ಲಿ ಪಿಡಿಒ ರೇಣುಕಾ ಸಸ್ಪೆಂಡ್  

ಸತ್ಯ ದರ್ಶನ

ವಿಜಯಪುರ: ಗ್ರಾ.ಪಂ. ಸದಸ್ಯೆಯೊಬ್ಬರಿಗೆ ಸ್ಥಳೀಯ ಸಂಸ್ಥೆಗಳ ಮೇಲ್ಮನೆ ಚುನಾವಣೆಯಲ್ಲಿ ಮತದಾನ ಮಾಡಲು ಅಗತ್ಯವಿಲ್ಲದಿದ್ದರೂ ಸಹಾಯಕರ ಅಗತ್ಯವಿದೆ ಎಂದು ದೃಢೀಕರಣ ನೀಡಿದ ಆರೋಪದಲ್ಲಿ ಪಿಡಿಒ ರೇಣುಕಾ ಸೋಲಾಪುರ ಅವರನ್ನು ಅಮಾನತು ಮಾಡಲಾಗಿದೆ.

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರ ಗ್ರಾ.ಪಂ. ಪಿಡಿಒ ರೇಣುಕಾ ಸೋಲಾಪುರ ಇವರನ್ನು ಚುನಾವಣೆ ಕರ್ತವ್ಯ ಲೋಪದ ಆರೋಪದಲ್ಲಿ ವಿಜಯಪುರ ಜಿಲ್ಲಾಧಿಕಾರಿ ಸುನಿಲ ಕುಮಾರ ಅಮಾನತು ಮಾಡಿದ ಆದೇಶ ಹೊರಡಿಸಿದ್ದಾರೆ

ಬಾಬಾನಗರ ಗ್ರಾ.ಪಂ. ಸದಸ್ಯೆ ಮುತ್ತವ್ವ ಶ್ರೀಶೈಲ ಗೌಡನವರ ಅವರಿಗೆ ಡಿ.7 ರಂದು ನೀಡಿದ ದೃಢೀಕರಣ ಪ್ರಮಾಣ ಪತ್ರದಲ್ಲಿ ಹೆಬ್ಬೆಟ್ಟು ಸಹಿ ಇದೆ ಎಂದು, ಇದಕ್ಕೂ ಮೊದಲ ಡಿ.6 ರಂದು ನೀಡಿದ ದೃಢೀಕರಣ ಪ್ರಮಾಣ ಪತ್ರದಲ್ಲಿ ಎಂಎಸ್‍ಜಿ ಎಂದೂ ದೃಢೀಕರಿಸಲಾಗಿದೆ. ಒಬ್ಬರೇ ಸದಸ್ಯರಿಗೆ ಎರಡು ರೀತಿಯಲ್ಲಿ ದೃಢೀಕರಣ ನೀಡಿದ ಆರೋಪದಲ್ಲಿ ಪಿಡಿಒ ರೇಣುಕಾ ಅವರನ್ನು ಅಮಾನತು ಮಾಡಲಾಗಿದೆ.

Related posts

ರೈತ ಬಾಂಧವರಿಗೆ ಇ- ಕೆವೈಸಿ ಕಡ್ಡಾಯ

satyadarshana

ಆಕ್ಸಿಜನೈಸ್ಡ್ 100 ಹಾಸಿಗೆಗಳ ಮಾಡ್ಯುಲಸ್‌ ಆಸ್ಪತ್ರೆ ತಲೆ ಎತ್ತಲಿದೆ

satyadarshana

ಗಣೇಶ ಮೂರ್ತಿಯ ಪ್ರತಿಷ್ಠಾಪನೆ. ಹುಬ್ಬಳ್ಳಿ ಈದ್ಗಾದಲ್ಲಿ ಚೌತಿ ಆಚರಣೆಗೆ ಹೈಕೋರ್ಟ್‌ ಅಸ್ತು ;

satyadarshana

Leave a Comment