Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಸತ್ಯ ಎದುರಿಸುವ ಸಂದರ್ಭ ಬಂದಾಗ ಕಾಂಗ್ರೆಸ್‌ನವರು ಆ ಶಕ್ತಿ ಪಡೆದುಕೊಳ್ಳಲಿ: ಬೊಮ್ಮಾಯಿ ಟಾಂಗ್.

ಗದಗ: ಕಾಂಗ್ರೆಸ್‌ನವರು ಸ್ವಚ್ಛ ಮನಸ್ಸುಗಳಂತೆ ಮಾತನಾಡುತ್ತಾರೆ. ಸ್ವಲ್ಪ ದಿನ ಕಾದರೆ ಸತ್ಯ ಎದುರಿಸುವ ಸಂದರ್ಭ ಕಾಂಗ್ರೆಸ್‌ಗೆ ಬರುತ್ತದೆ.

ಆ ಸತ್ಯ ಎದುರಿಸುವ ಶಕ್ತಿ ಕಾಂಗ್ರೆಸ್‌ನವರು ಪಡೆದುಕೊಳ್ಳಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದರು.

ನಗರದ ವಿವೇಕಾನಂದ ಸಭಾಂಗಣದಲ್ಲಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಬೊಮ್ಮಾಯಿ, ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ದೇಶದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ, ಲೂಟಿ ನಡೆದಿದೆ. ಇದಕ್ಕೆ ಇತಿಹಾಸದಲ್ಲಿ ಸಾಕ್ಷಿ ಇದೆ. ಕಾಂಗ್ರೆಸ್ ಸಾಮಾಜಿಕವಾಗಿ ಒಡೆದು ಆಳುವುದು ಹಾಗೂ ತುಷ್ಟೀಕರಣ ನೀತಿ ಪ್ರಾರಂಭಿಸಿತು. ಭ್ರಷ್ಟಾಚಾರ ಪರಂಪರೆಯನ್ನು ಪ್ರಾರಂಭಿಸಿದ್ದೇ ಕಾಂಗ್ರೆಸ್ ಎಂದು ಆರೋಪಿಸಿದರು.

ಅಧಿಕಾರ ಕಳೆದುಕೊಂಡಿರುವ ಕಾಂಗ್ರೆಸ್ ನಾಯಕರು ಇಂದು ಹತಾಶರಾಗಿ ನಮ್ಮ ಪಕ್ಷದ ನಾಯಕರ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಾವು ಶುಭ್ರರು ಎಂದು ಬಿಂಬಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದರೆ ನಾನು ಗಮನಿಸಿದಂತೆ ರಾಜ್ಯದ ವಿರೋಧ ಪಕ್ಷದಲ್ಲಿ ಇಂದು ತೊಳಲಾಟ ಪ್ರಾರಂಭವಾಗಿದೆ. ಅದನ್ನು ಮುಚ್ಚಿಟ್ಟುಕೊಳ್ಳಲು ಕಾಂಗ್ರೆಸ್‌ನವರು ನಾಟಕ ಪ್ರಾರಂಭ ಮಾಡಿದ್ದಾರೆ ಎಂದರು.

ಮುಖ್ಯಮಂತ್ರಿ ಬೊಮ್ಮಾಯಿ ಅವರು ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಆಯೋಜಿಸಿದ್ದ ನರಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಕಾರ್ಯವನ್ನು ನೆರವೇರಿಸಿ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

Related posts

ವಿಶ್ವಕಪ್ ಫೈನಲ್: ಪ್ರಧಾನಿ ಮೋದಿ, ಅಮಿತಾಬ್ ಬಚ್ಚನ್, ರಜನಿಕಾಂತ್ ಸೇರಿ ಕ್ರಿಕೆಟ್ ದಿಗ್ಗಜರು ಪಂದ್ಯ ವೀಕ್ಷಣೆ

satyadarshana

ಬೆಳ್ಳಂಬೆಳಗ್ಗೆ ಗದಗ, ಹಡಗಲಿ, ಹಾವೇರಿ ಸೇರಿ 6 ಕಡೆಗಳಲ್ಲಿ ದಾಳಿ

satyadarshana

ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ * ಅಂಜನಾದ್ರಿ ಬೆಟ್ಟಕ್ಕೆ ಕೇಂದ್ರ ಸಚಿವರ ಭೇಟಿ: ವಿಶೇಷ ಪೂಜೆ

satyadarshana

Leave a Comment