Satya Darshana
ಬಿಸಿ ಬಿಸಿ ಸುದ್ದಿ
ಕ್ರೀಡೆಬಿಸಿ ಬಿಸಿ ಸುದ್ದಿ

ದಕ್ಷಿಣ ಆಫ್ರಿಕಾ ತಂಡಗಳ ನಡುವಣ ಟಿ20 ಸರಣಿಯ ಕೊನೆಯ ಪಂದ್ಯವು ರೋಚಕ , ಪಂದ್ಯ ದಿನ ಕೂಡ ಮಳೆಯಾಗುವ ಸಾಧ್ಯತೆ ಇದೆ.?

ಬೆಂಗಳೂರು:    ಭಾನುವಾರ ರಾತ್ರಿ ಇಲ್ಲಿ ನಡೆಯಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಣ ಟಿ20 ಸರಣಿಯ ಕೊನೆಯ ಪಂದ್ಯವು ರೋಚಕ ರಸದೌತಣ ನೀಡುವ ನಿರೀಕ್ಷೆಯಲ್ಲಿ ಕ್ರಿಕೆಟ್‌ಪ್ರೇಮಿಗಳಿದ್ದಾರೆ. ಆದರೆ ಕಳೆದ ಮೂರು ದಿನಗಳಿಂದ ರಾತ್ರಿ ಹೊತ್ತಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.

ಆದರೆ, ಮಹಾನಗರಿಯ ಕ್ರಿಕೆಟ್ ರಸಿಕರ ಉತ್ಸಾಹ ಮಾತ್ರ ಕುಂದಿಲ್ಲ. ಟಿಕೆಟ್‌ ಪಡೆಯುವ ಪ್ರಯತ್ನವನ್ನು ಮುಂದುವರಿಸಿದ್ದಾರೆ. ಇಷ್ಟೊಂದು ಬೇಡಿಕೆ ಕುದುರಲು ಪ್ರಮುಖ ಕಾರಣವೆಂದರೆ, ಐದು ಪಂದ್ಯಗಳ ಸರಣಿಯ ಉಭಯ ತಂಡಗಳು 2–2ರಿಂದ ಸಮಬಲ ಸಾಧಿಸಿರುವುದು. ಇದರಿಂದಾಗಿ ಇಲ್ಲಿಯ ಪಂದ್ಯವು ನಿರ್ಣಾಯಕವಾಗಲಿದೆ.

ಅಲ್ಲದೇ; ಮೂರು ವರ್ಷಗಳ ನಂತರ ನಗರದಲ್ಲಿ ಅಂತರರಾಷ್ಟ್ರೀಯ ಟಿ20 ಪಂದ್ಯ ನಡೆಯುತ್ತಿರುವುದರಿಂದಲೂ ಜನರ ಕುತೂಹಲ ಹೆಚ್ಚಿದೆ. ಕೋವಿಡ್ ಕಾರಣದಿಂದ ಎರಡು ವರ್ಷ ಇಲ್ಲಿ ಐಪಿಎಲ್ ಮತ್ತು ಏಕದಿನ ಪಂದ್ಯಗಳೂ ನಡೆದಿಲ್ಲ. ಕಳೆದ ಮಾರ್ಚ್‌ನಲ್ಲಿ ನಡೆದಿದ್ದ ಭಾರತ–ಶ್ರೀಲಂಕಾ ಹೊನಲು ಬೆಳಕಿನ ಟೆಸ್ಟ್ ಪಂದ್ಯಕ್ಕೂ ಜನಸಾಗರ ಹರಿದು ಬಂದಿತ್ತು.

ಡಿ.ಕೆ ಆಕರ್ಷಣೆ: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಜಸ್‌ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ ಅವರಂತಹ ಖ್ಯಾತನಾಮರು ಈ ಸರಣಿಯಲ್ಲಿ ಆಡುತ್ತಿಲ್ಲ.

ಯುವನಾಯಕ ರಿಷಭ್ ಪಂತ್ ಮುನ್ನಡೆಸುತ್ತಿರುವ ಈ  ತಂಡದಲ್ಲಿ  ದಿನೇಶ್ ಕಾರ್ತಿಕ್ ಅವರೇ ಪ್ರಮುಖ ಆಕರ್ಷಣೆಯಾಗಿದ್ದಾರೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯಲ್ಲಿ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಮಿಂಚಿದ್ದರು. ಈ ತಂಡಕ್ಕೆ ಬಂದ ಮೇಲೆ ಮೊದಲ ಸಲ ಅವರು  ಇಲ್ಲಿ ಆಡಲಿದ್ದಾರೆ.

ಸರಣಿಯ ಮೊದಲೆರಡೂ ಪಂದ್ಯಗಳಲ್ಲಿ ಭಾರತ ಸೋಲನುಭವಿಸಿತ್ತು. ಮೂರನೇ ಪಂದ್ಯದಲ್ಲಿ ಆತಿಥೇಯ ತಂಡದ ಆರಂಭಿಕ ಬ್ಯಾಟರ್‌ಗಳು ಮತ್ತು ಬೌಲರ್‌ಗಳು ಪ್ರತಾಪ ಮೆರೆದು ಜಯಕ್ಕೆ ಕಾರಣರಾಗಿದ್ದರು. ರಾಜ್‌ಕೋಟ್‌ನಲ್ಲಿ ನಡೆದಿದ್ದ ನಾಲ್ಕನೇ ಪಂದ್ಯದಲ್ಲಿ ಮಿಂಚಿನ ಅರ್ಧಶತಕ ಹೊಡೆದಿದ್ದ ದಿನೇಶ್ ಗೆಲುವಿನ ರೂವಾರಿಯಾಗಿದ್ದರು. ಅವರೊಂದಿಗೆ ಹಾರ್ದಿಕ್ ಪಾಂಡ್ಯ ಕೂಡ ಮಿಂಚಿದ್ದರು.

ಆದರೆ, ನಾಯಕ ರಿಷಭ್ ಬ್ಯಾಟಿಂಗ್‌ನಲ್ಲಿ ಲಯ ಕಂಡುಕೊಳ್ಳಲು ಪರದಾಡುತ್ತಿದ್ದಾರೆ. ಸರಣಿಯಲ್ಲಿ ಎರಡು ಅರ್ಧಶತಕ ಹೊಡೆದಿರುವ ಇಶಾನ್ ಉತ್ತಮ ಲಯದಲ್ಲಿದ್ದು, ಋತುರಾಜ್ ಮತ್ತು ಶ್ರೇಯಸ್ ಅಸ್ಥಿರ ಪ್ರದರ್ಶನ ನೀಡಿದ್ದಾರೆ. ಆರ್‌ಸಿಬಿಯ ಪ್ರತಿಭೆ, ಮಧ್ಯಮವೇಗಿ ಹರ್ಷಲ್ ಪಟೇಲ್, ಆವೇಶ್ ಖಾನ್ ಮತ್ತು ಸ್ಪಿನ್ನರ್ ಯಜುವೇಂದ್ರ ಚಾಹಲ್ ಬೌಲಿಂಗ್ ವಿಭಾಗದ ಶಕ್ತಿಯಾಗಿದ್ದಾರೆ.

ಪ್ರವಾಸಿ ಬಳಗದ ಬ್ಯಾಟಿಂಗ್ ಪಡೆ ಬಲಿಷ್ಠವಾಗಿದೆ. ಕ್ವಿಂಟನ್ ಡಿಕಾಕ್, ರಸಿ ವ್ಯಾನ್ ಡರ್ ಡಸೆ, ಕ್ಲಾಸನ್, ಡೇವಿಡ್ ಮಿಲ್ಲರ್ ಅವರು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಆಡಿದರೆ ಆತಿಥೇಯ ಬೌಲರ್‌ಗಳಿಗೆ ಕಷ್ಟವಾಗುವುದು ಖಚಿತ. ಬೌಲಿಂಗ್ ಪಡೆಯು ಸಮತೋಲನದಿಂದ ಕೂಡಿದೆ. ಆತಿಥೇಯ ಬ್ಯಾಟರ್‌ಗಳಿಗೆ ಸವಾಲೊಡ್ಡಲು ಸಿದ್ಧವಾಗಿದೆ.

Related posts

ಅಕಾಲಿಕ, ಅತಿವೃಷ್ಟಿಯಿಂದ ರೈತರಿಗಾಗಿರುವ ಎಲ್ಲ ಬೆಳೆಗಳ ನಷ್ಟದ ಪರಿಹಾರವನ್ನು ಶೀಘ್ರ ರೈತರ ಖಾತೆಗಳಿಗೆ ಜಮೆ ಮಾಡಬೇಕೆಂದು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ

satyadarshana

ಕರ್ತವ್ಯ ಲೋಪ ಮಾಡದೇ ಸಾರ್ವಜನಿಕರ ಹಿತಾಸಕ್ತಿಗೆ ಅನುಗುಣವಾಗಿ ಇಲಾಖಾಧಿಕಾರಿಗಳು ಕರ್ತವ್ಯ ನಿರ್ವಹಿಸಿ.}ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ

satyadarshana

ಹಲವಾರು ಚಳುವಳಿ ಮಾಡುವ ಮೂಲಕ ಎಲ್ಲಾ ಸರ್ಕಾರಗಳಿಗೆ ನಮ್ಮ ಎಚ್ಚರಿಕೆ ಕೊಟ್ಟಿದ್ದೇವೆ.ಬಸವರಾಜ ಕಡಿಬಿನ

satyadarshana

Leave a Comment