Satya Darshana
ಬಿಸಿ ಬಿಸಿ ಸುದ್ದಿ
ದೇಶ-ವಿದೇಶಬಿಸಿ ಬಿಸಿ ಸುದ್ದಿ

ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ನಿವಾಸಕ್ಕೆ ಮುತ್ತಿಗೆ ಹಾಕಿ.ಭಾರಿ ಹಣ ವಶಕ್ಕೆ ಪಡೆದ ಪ್ರತಿಭಟನಾಕಾರರು

ಕೊಲಂಬೊ: ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು, ಅಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ಭಾನುವಾರ ವರದಿ ಮಾಡಿವೆ

‘ಪ್ರತಿಭಟನಾಕಾರರು ಕರೆನ್ಸಿ ನೋಟುಗಳನ್ನು ಎಣಿಸುವ ವಿಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ವಶಪಡಿಸಿಕೊಂಡ ಹಣವನ್ನು ಭದ್ರತಾ ಸಿಬ್ಬಂದಿಗೆ ಹಸ್ತಾಂತರಿಸಲಾಗುತ್ತದೆ’ ಎಂದು ‘ಡೈಲಿ ಮಿರರ್’ ಪತ್ರಿಕೆ ವರದಿ ಮಾಡಿದೆ.

ಘಟನೆಯನ್ನು ಪರಿಶೀಲಿಸಿದ ನಂತರ ವಾಸ್ತವ ತಿಳಿಯಲು ಸಾಧ್ಯ. ಅದಕ್ಕಾಗಿ ಕ್ರಮಕೈಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಅಧ್ಯಕ್ಷ ಗೊಟಬಯ ರಾಜಪಕ್ಸೆ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನಾಕಾರರು ಶನಿವಾರ ಮಧ್ಯ ಕೊಲಂಬೊದಲ್ಲಿರುವ ರಾಜಪಕ್ಸೆ ಅವರ ನಿವಾಸಕ್ಕೆ ನುಗ್ಗಿದರು. ಅದಕ್ಕೂ ಮೊದಲೇ ರಾಜಪಕ್ಸೆ ನಿವಾಸದಿಂದ ಪಲಾಯನ ಮಾಡಿದ್ದರು. ಪ್ರತಿಭಟನಾಕಾರರ ಮತ್ತೊಂದು ಗುಂಪು ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರ ಖಾಸಗಿ ನಿವಾಸಕ್ಕೆ ನುಗ್ಗಿ ಬೆಂಕಿ ಹಚ್ಚಿದೆ. ಅವರೂ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಅಧ್ಯಕ್ಷ ಗೊಟಬಯ ಎಲ್ಲಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಮಧ್ಯೆ ಅವರು ಸಂಸತ್ತಿನ ಸ್ಪೀಕರ್ ಮಹಿಂದ ಯಾಪಾ ಅಬೇವರ್ಧನ ಅವರೊಂದಿ ಸಂವಹನ ನಡೆಸಿದ್ದು, ಬುಧವಾರ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

 

Related posts

ಸಂಪಾದಕರ ಸಂಘದ ಕೊಪ್ಪಳ ಘಟಕಕ್ಕೆ ನೂತನ ಸಾರಥಿಗಳು ಅಧ್ಯಕ್ಷರಾಗಿ ಶ್ರೀನಿವಾಸ, ಕಾರ್ಯದರ್ಶೀಯಾಗಿ ಖಲೀಲ್ ಉಡೇವು ಆಯ್ಕೆ

satyadarshana

ಗಜೇಂದ್ರಗಡದ ಕಾಲಕಾಲೇಶ್ವರ ಸರ್ಕಲ್ ನಲ್ಲಿ ವಿದ್ಯಾರ್ಥಿಗಳು ಬಸ್‌ ತಡೆದು ಪ್ರತಿಭಟನೆ

satyadarshana

ಮುಪ್ಪಿನ ಬಸವಲಿಂಗದೇವರ ನಿರಂಜನ ಚರ ಪಟ್ಟಾಧಿಕಾರ ಮಹೋತ್ಸವ ಹಾಗೂ ಲಕ್ಷದೀಪೋತ್ಸವ ಸಮಾರಂಭಕ್ಕೆ ಆಗಮಿಸಿದ ವಿಧಾನಪರಿಷತ್ ಸಭಾಪತಿ . ಬಸವರಾಜ ಹೊರಟ್ಟಿ

satyadarshana