Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ಹೈಕೋರ್ಟ್‌ ಆದೇಶದಂತೆ ಎಸಿಬಿ ರದ್ದು: ಲೋಕಾಯುಕ್ತಕ್ಕೆ ಬಲ.

ಬೆಂಗಳೂರು: 10 ಸಪ್ಟಂಬರ್  ಹೈಕೋರ್ಟ್‌ ಆದೇಶದಂತೆ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಿರುವ ರಾಜ್ಯ ಸರ್ಕಾರ, ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಹಿಂದೆ ನೀಡಿದ್ದ ಅಧಿಕಾರಗಳನ್ನು ಮರುಸ್ಥಾಪಿಸಿ ಶುಕ್ರವಾರ ಆದೇಶ ಹೊರಡಿಸಿದೆ.
ಎಸಿಬಿಯಲ್ಲಿ ತನಿಖಾ ಹಂತದಲ್ಲಿರುವ ಪ್ರಕರಣಗಳು, ಬಾಕಿ ಇರುವ ವಿಚಾರಣೆಗಳು, ಶಿಸ್ತುಕ್ರಮಕ್ಕೆ ಸಂಬಂಧಿಸಿದ ಪ್ರಕರಣಗಳು ಮತ್ತು ಖಾಸಗಿ ದೂರುಗಳಿಗೆ ಸಂಬಂಧಿಸಿದ ಎಲ್ಲ ಪ್ರಕರಣಗಳನ್ನೂ ಲೋಕಾಯುಕ್ತಕ್ಕೆ ವರ್ಗಾಯಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
2016ರಲ್ಲಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ತನಿಖೆ ನಡೆಸುವ ಅಧಿಕಾರವನ್ನು ಲೋಕಾಯುಕ್ತ ಪೊಲೀಸ್‌ ವಿಭಾಗದಿಂದ ಹಿಂಪಡೆದು ಎಸಿಬಿ ರಚಿಸಿತ್ತು. ಇದನ್ನು ರದ್ದುಗೊಳಿಸಿ ಹೈಕೋರ್ಟ್‌ ವಿಭಾಗೀಯ ಪೀಠ ಇದೇ ಆಗಸ್ಟ್‌ 11ರಂದು ತೀರ್ಪು ನೀಡಿತ್ತು.

Related posts

“ಪ್ರತಿಯೊಬ್ಬರಿಗೂ ಕಾನೂನು ಅರಿವು ಅಗತ್ಯ”  

satyadarshana

ಸೋಮವಾರದಿಂದ ಎಲ್ಲಾ ಮಾದರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಲಿವೆ. ಮಕ್ಕಳಿಗೆ ಗುಲಾಬಿ ಹೂ, ಚಾಕೊಲೇಟ್‌ ನೀಡಿ ಸ್ವಾಗತ:

satyadarshana

ಸೂಡಿ ಗ್ರಾ,ಪಂ ಅಧ್ಯಕ್ಷೆಯಾಗಿ ಖಾದಿರಬಿ ಡಾಲಾಯತ ಆಯ್ಕೆ

satyadarshana

Leave a Comment