ಶಿರಹಟ್ಟಿ ( ಸತ್ಯ ದರ್ಶನ ) ಸೆ.17: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಶನಿವಾರ ಜಿಲ್ಲೆಯ ಕಟ್ಟಕಡೆಯ ಗ್ರಾಮವಾದ ಶಿರಹಟ್ಟಿ ತಾಲೂಕಿನ ಹೆಬ್ಬಾಳ ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರಿಗೆ ಗ್ರಾಮಸ್ಥರಿಂದ ಅಭೂತಪೂರ್ವ ಸ್ವಾಗತ ದೊರೆಯಿತು.
ಜಿಲ್ಲಾಧಿಕಾರಿಗಳು ಕನಕವಾಡದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಆಗಮಿಸುತ್ತಿದ್ದಂತೆ ಗ್ರಾಮದ ಮಹಿಳೆಯರು ಪೂರ್ಣ ಕುಂಬ, ಮೇಳದೊಂದಿಗೆ ಜಿಲ್ಲಾಧಿಕಾರಿಗಳಿಗೆ ಅರಿಶಿನ ಕುಂಕುಮ ನೀಡುವ ಮೂಲಕ ಸ್ವಾಗತ ಕೋರಿದರು.
ಕನಕವಾಡದಿಂದ ಹೆಬ್ಬಾಳದ ವರೆಗೆ ಅಲಂಕೃತ ಎತ್ತಿನ ಬಂಡಿಯಲ್ಲಿ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಹೆಬ್ಬಾಳ ಗ್ರಾಮಕ್ಕೆ ಜಿಲ್ಲಾಧಿಕಾರಿ ಎಂ.ಎಲ್.ವೈಶಾಲಿ ಅವರನ್ನು ಅಪಾರ ಸಂಖ್ಯೆಯಲ್ಲಿ ಸೇರಿದಂತಹ ಗ್ರಾಮಸ್ಥರು ಮೆರವಣಿಗೆ ಮೂಲಕ ಗ್ರಾಮಕ್ಕೆ ಬರ ಮಾಡಿಕೊಂಡರು.
ಉಪವಿಭಾಗಾಧಿಕಾರಿ ಅನ್ನಪೂರ್ಣ, ತಹಶೀಲ್ದಾರ ಕಲಗೌಡ ಪಾಟೀಲ ಜಿಲ್ಲಾಧಿಕಾರಿಗಳಿಗೆ ಸಾಥ ನೀಡಿದರು.
