Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಅಂತರ್ ವಿಭಾಗೀಯ ವ್ಹಾಲಿಬಾಲ್ ಪಂದ್ಯಾವಳಿ

ಗದಗ ( ಸತ್ಯದರ್ಶ ನ ) ಸೆಪ್ಟೆಂಬರ್ 22: ವಾ.ಕ.ರ.ಸಾ.ಸಂಸ್ಥೆಯ ವ್ಯಾಪ್ತಿಯ ಹುಬ್ಬಳ್ಳಿ ಗ್ರಾಮಾಂತರ, ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ, ಧಾರವಾಡ ಗ್ರಾಮಾಂತರ, ಬೆಳಗಾವಿ, ಗದಗ, ಹಾವೇರಿ, ಬಾಗಲಕೋಟೆ, ಚಿಕ್ಕೋಡಿ ಮತ್ತು ಶಿರಸಿ ವಿಭಾಗಗಳಿಗೆ ಪ್ರಾದೇಶಿಕ ತರಬೇತಿ ಕೇಂದ್ರದ ಆವರಣ ಹುಬ್ಬಳ್ಳಿಯಲ್ಲಿ ಬುಧವಾರದಂದು ಅಂತರ್ ವಿಭಾಗೀಯ ವ್ಹಾಲಿಬಾಲ್ ಪಂದ್ಯಾವಳಿಗಳನ್ನು ಏರ್ಪಡಿಸಲಾಗಿತ್ತು. 

          ಪಂದ್ಯಾವಳಿಗಳನ್ನು ವ್ಯವಸ್ಥಾಪಕ ನಿರ್ದೇಶಕರಾದ ಭರತ ಅವರು ಉದ್ಘಾಟಿಸಿ ಮಾತನಾಡುತ್ತಾ ಮುಂಬರುವ ಸಂಸ್ಥೆಯ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಪಂದ್ಯಾವಳಿಗಳನ್ಮು ಆಯೊಜಿಸಲಾಗಿದ್ದು, ಸಿಬ್ಬಂದಿಗಳಲ್ಲಿ ಪರಸ್ಪರ ಸೌಹಾರ್ದತೆ ಮೂಡಲು ಇಂತಹ ಪಂದ್ಯಾವಳಿಗಳಿಂದ ಸಾಧ್ಯವಿದ್ದು, ಎಲ್ಲ ತಂಡಗಳು ಕ್ರೀಡಾ ನಿಯಮಗಳನ್ನು ಪಾಲಿಸುವಂತೆ ತಿಳಿಸಿ, ಪಂದ್ಯಾವಳಿಯಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.

   ಕೇಂದ್ರ ಕಛೇರಿಯ ಇಲಾಖಾ ಮುಖ್ಯಸ್ಥರಾದ ರಾಜೇಶ ಹುದ್ದಾರ, ಎಚ್.ಎಂ.ರಮೇಶ್, ನಾರಾಯಣಪ್ಪ ಕುರುಬರ ಶಶಿಧರ ಕುಂಬಾರ, ವೀರಭದ್ರಪ್ಪ, ದಶರಥ ಕೆಳಗೇರಿ, ವೇಣುಗೋಪಾಲ ಹಾಗೂ ಅಧಿಕಾರಿಗಳಾದ ಎಂ.ಬಿ.ಕಪಲಿ, ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ವಿವೇಕಾನಂದ ವಿಶ್ವಜ್ಞ ಉಪಸ್ಥಿತರಿದ್ದರು.

         ವಾ.ಕ.ರ.ಸಾ.ಸಂಸ್ಥೆಯ ವ್ಯಾಪ್ತಿಯ 9 ವಿಭಾಗಗಳು, ಪ್ರಾದೇಶಿಕ ಕಾರ್ಯಾಗಾರ ಮತ್ತು ಕೇಂದ್ರ ಕಛೇರಿಯಿಂದ ಒಟ್ಟು 11 ತಂಡಗಳು ಭಾಗವಹಿಸಿದ್ದವು.  

Related posts

ಅಂತರರಾಷ್ಟ್ರೀಯ ಕ್ರಿಕೆಟಿಗ ಸುನಿಲ್ ಜೋಶಿ ಮನವಿಗೆ ಸಾರಿಗೆ ಸಚಿವ ರಾಮುಲು ಸ್ಪಂದನೆ..

satyadarshana

ರೈತ ಬಾಂಧವರೇ ಫ್ರೂಟ್ಸ ನೋಂದಣಿ ಶೀಘ್ರವೇ ಮಾಡಿಸಿ

satyadarshana

ಸತ್ಯದರ್ಶನ ಕನ್ನಡ ದಿನಪತ್ರಿಕೆ. 11 04.2023

satyadarshana

Leave a Comment