ಗದಗ :ಅ. 25: ಗದಗ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಚರ್ಮಗಂಟು ಪರಿಣಾಮಕಾರಿಯಾಗಿ ತಡೆಗಟ್ಟಲು ಈಗಾಗಲೇ ಜಾನುವಾರುಗಳ ಸಂತೆ, ಜಾತ್ರೆ ಮತ್ತು ಜಾನುವಾರು ಸಾಕಾಣಿಕೆ ನಿಷೇಧಿಸಲಾಗಿದೆ.
ಇತ್ತೀಚೆಗೆ ನಗರದಲ್ಲಿ ಚರ್ಮಗಂಟು ಕಾಯಿಲೆ ವಿರುದ್ಧ ಲಸಿಕೆಯನ್ನು ಬೀದಿ ಬದಿಯ ಜಾನುವಾರುಗಳಿಗೆ ಹಾಕಲಾಯಿತು. ಜಾನುವಾರು ಮಾಲೀಕರು ತಮ್ಮ ತಮ್ಮ ಜಾನುವಾರುಗಳಿಗೆ ತಪ್ಪದೇ ಲಸಿಕೆ ಹಾಕಿಸುವ ಮೂಲಕ ಚರ್ಮಗಂಟು ಕಾಯಿಲೆ ನಿಯಂತ್ರಣಕ್ಕೆ ಮುಂದಾಗಬೇಕೆಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
