Satya Darshana
ಬಿಸಿ ಬಿಸಿ ಸುದ್ದಿ
ಬಿಸಿ ಬಿಸಿ ಸುದ್ದಿರಾಜ್ಯ

ರಾಜ್ಯದ ರೈತರು ಬೆಳೆದ ಈರುಳ್ಳಿಗೆ ಸೂಕ್ತ ಬೆಲೆ ದೊರೆಯುತ್ತಿಲ್ಲ..

ಬೆಂಗಳೂರು, ನ.9- ಮಹಾರಾಷ್ಟ್ರದಿಂದ ನಿರೀಕ್ಷೆಗೂ ಮೀರಿ ಮಾರುಕಟ್ಟೆಗೆ ಬರುತ್ತಿದ್ದು, ರಾಜ್ಯದ ರೈತರು ಬೆಳೆದ ಬೆಳೆಗೆ ಮಾತ್ರ ಉತ್ತಮ ಬೆಲೆ ಸಿಗದೆ ಕಂಗಾಲಾಗಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಬೆಳೆಯಲಾಗಿದ್ದ ಭಾರೀ ಪ್ರಮಾಣದ ಬೆಳೆ ನಾಶವಾಗಿದ್ದು, ಗುಣಮಟ್ಟದ ಈರುಳ್ಳಿ ಪೂರೈಕೆಯಾಗದ ಕಾರಣ ಮಹಾರಾಷ್ಟ್ರದಿಂದ ಈರುಳ್ಳಿ ಆಮದಾಗುತ್ತಿದೆ. ಇದರಿಂದ ರಾಜ್ಯದ ರೈತರು ಬೆಳೆದ ಈರುಳ್ಳಿಗೆ ಸೂಕ್ತ ಬೆಲೆ ದೊರೆಯುತ್ತಿಲ್ಲ.

ಯಶವಂತಪುರದ ಎಪಿಎಂಸಿ ಮಾರುಕಟ್ಟೆಗೆ ಮಹಾರಾಷ್ಟ್ರ ದಿಂದ ಭಾರೀ ಪ್ರಮಾಣದಲ್ಲಿ ಈರುಳ್ಳಿ ಬರುತ್ತಿದೆ. ಇದರಿಂದಾಗಿ ರಾಜ್ಯದ ರೈತರು ಬೆಳೆದ ಈರುಳ್ಳಿಗೆ ಉತ್ತಮ ಬೆಲೆ ಸಿಗದೆ ಕಂಗಾಲಾಗಿದ್ದಾರೆ.

ಪ್ರತಿ ವರ್ಷವೂ ಇದೇ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಬೆಳೆಗಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರೈತರ ಸರ್ಕಾರ ಎಂದು ಹೇಳುತ್ತಿರುವ ಬಿಜೆಪಿ ರೈತರನ್ನು ಕಡೆಗಣನೆ ಮಾಡಿದೆ. ಹೊರರಾಜ್ಯಗಳಿಂದ ಆಮದಾಗುತ್ತಿರುವ ಈರುಳ್ಳಿಯನ್ನು ನಿಲ್ಲಿಸಿ ರಾಜ್ಯದ ರೈತರು ಬೆಳೆದ ಈರುಳ್ಳಿಗೆ ಸೂಕ್ತ ಬೆಲೆ ದೊರಕಿಸುವಂತೆ ಬೆಳೆಗಾರರು ಆಗ್ರಹಿಸಿದ್ದಾರೆ.

ಸಗಟು ವ್ಯಾಪಾರದಲ್ಲಿ ಕೆಜಿಗೆ 30 ರಿಂದ 40ರೂ.ಗೆ ಮಾರಾಟವಾಗುತ್ತಿದೆ. ಕ್ವಿಂಟಾಲ್‍ಗೆ 600ರೂ. ನಿಂದ 800 ರೂ.ಗೆ ಇಳಿಕೆಯಾಗಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.

 

Related posts

ಕೊಪ್ಪಳ ಬೆಳ್ಳಿ ಹಬ್ಬದಲ್ಲಿ ಗಮನ ಸೆಳೆದ ಪ್ರವಾಸೋದ್ಯಮ ಇಲಾಖೆಯ ಪ್ರದರ್ಶನ ಮಳಿಗೆ

satyadarshana

ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರ.

satyadarshana

ಸುಳ್ಳು ಸಂದೇಶಗಳ ರಹದಾರಿ; ವಾಟ್ಸಾಪ್ ನಿಷೇಧಿಸಬೇಕೇ? ಬೇಡವೇ?

cradmin

Leave a Comment