ಬೆಂಗಳೂರು: ನವಂಬರ್ 25. ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರಿಗೆ ಹೃದಯಾಘಾತವಾಗಿದೆ.ಖಾಸಗಿ ರೆಸಾರ್ಟ್ ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಯುವಾಗಲೇ ಶ್ರೀಶೈಲಪ್ಪ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಭೆ ಆರಂಭವಾಗುತ್ತಿದ್ದಂತೆ ಕುಸಿದು ಬಿದ್ದು ಶ್ರೀ ಶೈಲಪ್ಪ ವಾಂತಿ ಮಾಡಿಕೊಂಡಿದ್ದಾರೆ. ಕಾರು ಇಳಿದು ಒಳಗೆ ಹೋಗುವಾಗಲೇ ಶ್ರೀಶೈಲಪ್ಪ ಸುಸ್ತಾಗಿದ್ದರು. ಬೆಳಿಗ್ಗೆ ತಿಂಡಿ ತಿನ್ನದೇ ಶ್ರೀಶೈಲಪ್ಪ ಬಿದರೂರು ಸಭೆಗೆ ಆಗಮಿಸಿದ್ದರು ಎನ್ನಲಾಗುತ್ತಿದೆ.
ಇಂದು ಆಯೋಜನೆಯಾಗಿದ್ದ ಕಾಂಗ್ರೆಸ್ ಸಭೆಯನ್ನು ರದ್ದು ಮಾಡಲಾಗಿದ್ದು, ರೆಸಾರ್ಟ್ನಲ್ಲಿ ಶ್ರದ್ದಾಂಜಲಿ ಸಭೆ ನಡೆಸಿ ಸಂತಾಪ ಸೂಚಿಸಲಾಯಿತು.
