ಸಿಂಧನೂರು: ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ಶ್ರೀ ಡೇರದೆ ನಾಗಲಿಂಗೇಶ್ವರ ಜಾತ್ರಾ ಮಹೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಕುಂಬಕಳಸಗಳೊಂದಿಗೆ ಪಲ್ಲಕ್ಕಿ ಉತ್ಸವ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.
ನಂತರ ಗ್ರಾಮದ ಗುರು ಹಿರಿಯರ ಸಮ್ಮುಖದಲ್ಲಿ ಅದ್ದೂರಿಯಾಗಿ ರಥೋತ್ಸವ ಜರುಗಿತು.
ದೇವಸ್ಥಾನದ ವತಿಯಿಂದ ಬೆಳಗ್ಗೆಯಿಂದ ಜಾತ್ರೆಗೆ ಆಗಮಿಸಿದ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.ಈ ಸಂದರ್ಭದಲ್ಲಿ ಕೆ.ಹೊಸಹಳ್ಳಿ ಗ್ರಾಮದ ಗುರುಹಿರಿಯರು,ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
