Satya Darshana
ಬಿಸಿ ಬಿಸಿ ಸುದ್ದಿ
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನಕ್ಕೆ ಚಾಲನೆ

 ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನಕ್ಕೆ ಚಾಲನೆ

ಗಜೇಂದ್ರಗಡ: ತಾಲೂಕಿನ ನಿಡಗುಂದಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ತಾಲೂಕು ಪಂಚಾಯತ್, ಅರಣ್ಯ ಇಲಾಖೆ, ಗ್ರಾಮ ಪಂಚಾಯತ್ ಸಹಯೋಗದಲ್ಲಿ ಇಂದು ವಿಶ್ವ ಪರಿಸರ ದಿನ ಅಂಗವಾಗಿ PLANT 4 MOTHER (ತಾಯಿಯ ಹೆಸರಿನಲ್ಲಿ ಒಂದು ವೃಕ್ಷ) ಅಭಿಯಾನ ಕಾರ್ಯಕ್ರಮಕ್ಕೆ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ ಬಡಿಗೇರ್ ಚಾಲನೆ ನೀಡಿದರು.

ಈ ವೇಳೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ ಬಡಿಗೇರ್ ಸಸಿಗೆ ನೀರುಣಿಸಿ ಮಾತನಾಡಿದ ಅವರು, ಮನುಷ್ಯ ಗಿಡಗಳನ್ನು ನಾಶ ಮಂಆಡುವ ಮೂಲಕ ಪರಿಸರ ನಾಶದಿಂದ ಪ್ರಕೃತಿ ವಿಕೋಪಗಳು ಹೆಚ್ಚಾಗುತ್ತಿದ್ದು, ಮನುಷ್ಯನ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಅದನ್ನು ತಪ್ಪಿಸಲು ಪರಿಸರ ರಕ್ಷಣೆಗೆ ನಾವು ನೀವುಗಳು ಮುಂದಾಗಬೇಕಾಗಿದೆ. ಆ ನಿಟ್ಟಿನಲ್ಲಿ ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ಅಭಿಯಾನ ದೇಶಾದ್ಯಂತ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

ಪ್ರತಿಯೊಬ್ಬರು ತಮ್ಮ ತಾಯಿಯ ಹೆಸರಿನಲ್ಲಿ ಒಂದು ಸಸಿ ನೆಟ್ಟು ಅವುಗಳನ್ನು ಪೋಷಿಸಿ ಬೆಳೆಸುವ ಮೂಲಕ ಪರಿಸರ ರಕ್ಷಣೆಯ ಮುಂದಾಗಬೇಖು. ಸಸಿ ನೆಟ್ಟು ಕೈಬಿಡಬೇಡಿ ಕನಿಷ್ಠ ವರ್ಷವಾದರೂ ಅದಕ್ಕೆ ನೀರು ಹಾಕುವ ಮೂಲಕ ಬೆಳೆಸಬೇಕು ಎಂದು ತಿಳಿಸಿದರು.

ಸಾಮಾಜಿಕ ಅರಣ್ಯ ಇಲಾಖೆ ಅಧಿಖಾರಿ ರಾಮಣ್ಣ ಪೂಜಾರ ಮಾತನಾಡಿ, ವಿಶ್ವ ಪರಿಸರ ದಿನ ಅಂಗವಾಗಿ ಪ್ರಧಾನ ಮಂತ್ರಿಯವರ ಪ್ಲಾಂಟ್ 4 ಮದರ್ (ತಾಯಿಯ ಹೆಸರಿನಲ್ಲಿ ಒಂದು ವೃಕ್ಷ ) ಅಭಿಯಾನ ಹಮ್ಮಿಕೊಳ್ಳಲು ಕರೆ ನೀಡಿದರು ಅದರಂತೆ ದೇಶಾದ್ಯಂತ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷರಾದ ಗೀತಾ ಫಕ್ಕಿರಪ್ಪ ಕುಕನೂರು, ಸದಸ್ಯರಾದ ಮರ್ತುಜಾ ಖಾದರ್ ಮುಲ್ಲಾ, ಅಂದಪ್ಪ ಚಲವಾದಿ, ಪಿಡಿಒ ಅಮರೇಶ ಮೂಲಿಮನಿ, ಕಾರ್ಯದರ್ಶಿ ಶರಣಪ್ಪ ಮೇಟಿ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾದ ರೇಖಾ ಹೊಸಮನಿ, ಗಣ್ಯರಾದ ಅಂದಪ್ಪ ಬಿಚ್ಚೂರು, ಗೋವಿಂದ ಪೂಜಾರ, ರಮೇಶ ಸೇಬಗೊಂಡ, ಹೊನ್ನಪ್ಪ ಕಂಬಳಿ, ಶರಣಪ್ಪ ಗಡಾದ, ಅರಣ್ಯ ಿಲಾಖೆ ಸಿಬ್ಬಂದಿಗಳಾದ ಜಗದೀಶ, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಪಂಚಾಯತ ಸಿಬ್ಬಂದಿಗಳು ಇದ್ದರು.

Related posts

ಕಾರಟಗಿ: ಭೂದಾಖಲೆಗಳ ಗಣಕೀಕರಣಕ್ಕೆ ಸಚಿವರಿಂದ ಚಾಲನೆ

satyadarshana

ಮರೆಯಲಾಗದ ಮಾಣಿಕ್ಯ ಡಾ.ಬಾಬಾ ಸಾಹೇಬ್ ಅಂಬೇಡ್ಕರವರು…

satyadarshana

ಜಿಮ್ಸ್‍ದಲ್ಲಿ 07 ತಿಂಗಳ ಮಗುವಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ.

satyadarshana

Leave a Comment