Satya Darshana
ಬಿಸಿ ಬಿಸಿ ಸುದ್ದಿ
Otherಕ್ರೀಡೆಜಿಲ್ಲೆಟ್ರೆಂಡ್ದೇಶ-ವಿದೇಶಫೋಟೋಬಿಸಿ ಬಿಸಿ ಸುದ್ದಿರಾಜ್ಯಲೈಫ್ ಸ್ಟೈಲ್ವಿಡಿಯೋಸಿನಿಮಾ

ಅಂಬೇಡ್ಕರ್ ಬಗ್ಗೆ ಸಂಸತ್ತಿನಲ್ಲಿ ಅವಹೇಳನಕಾರಿ ಹೇಳಿಕೆನಿಡಿದ, ಸಂವಿಧಾನಕ್ಕೆ ಅಪಚಾರ ಮಾಡಿದ ಗೃಹ ಸಚಿವ ಅಮಿತ್ ಶಾ ರಾಜಿನಾಮೆಗೆ ಚಂದ್ರು ರಾಠೋಡ ಆಗ್ರಹ.

 

 

ಅಂಬೇಡ್ಕರ್ ಬಗ್ಗೆ ಸಂಸತ್ತಿನಲ್ಲಿ ಅವಹೇಳನಕಾರಿ ಹೇಳಿಕೆನಿಡಿದ, ಸಂವಿಧಾನಕ್ಕೆ ಅಪಚಾರ ಮಾಡಿದ ಗೃಹ

ಸಚಿವ ಅಮಿತ್ ಶಾ ರಾಜಿನಾಮೆಗೆ ಚಂದ್ರು ರಾಠೋಡ ಆಗ್ರಹ.

ಡಾ. ಬಿ ಆರ್ ಅಂಬೇಡ್ಕರ್ ಅವರ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಮತ್ತು ಕೇಂದ್ರ ಗೃಹ ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಭಾರತ ವಿದ್ಯಾರ್ಥಿ ಫೆಡರೇಷನ್ ಎಸ್ ಎಫ್ ಐ ಜಿಲ್ಲಾ ಸಮಿತಿ ಒತ್ತಾಯ.

ಡಾ. ಬಿ ಆರ್ ಅಂಬೇಡ್ಕರ್ ಅವರ ಹೆಸರನ್ನು ತೆಗೆದುಕೊಳ್ಳುವುದು ಫ್ಯಾಷನ್ ಆಗಿಬಿಟ್ಟಿದೆ ಎಂದು ಟೀಕಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ದೇವರ ಹೆಸರನ್ನು ಪದೇ ಪದೇ ಹೇಳಿದ್ದರೆ 7 ಪಟ್ಟು ಸ್ವರ್ಗ ಗ್ಯಾರಂಟಿ ಎಂದು ಹೇಳಿದ್ದಾರೆ. ಇಂತಹ ಹೇಳಿಕೆಯು ಆರೆಸ್ಸೆಸ್-ಬಿಜೆಪಿಯ ಜಾತಿವಾದಿ ಮನಸ್ಥಿತಿಯನ್ನು ಬಹಿರಂಗಪಡಿಸುತ್ತದೆ, ಬಿಜೆಪಿ ಸರ್ಕಾರ ನಿರಂತರವಾಗಿ ದಲಿತ,ಹಿಂದುಳಿದ, ಅಲ್ಪ ಸಂಖ್ಯಾತ ಸಮುದಾಯಗಳ ಹಕ್ಕುಗಳ ಮೇಲೆ ದಾಳಿ ನಡೆಸುತ್ತಿದೆ.

ಶಿಕ್ಷಣ ಕ್ಷೇತ್ರದಲ್ಲೂ ಕೇಂದ್ರ ಸರ್ಕಾರ ಬಹಿರಂಗವಾಗಿ ದಲಿತ ವಿರೋಧಿ ಧೋರಣೆ ಪ್ರದರ್ಶಿಸುತ್ತಿದೆ. SC/ST ವರ್ಗದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ನಿಗದಿಪಡಿಸಲಾದ ಮೊತ್ತವು ಕ್ಯಾಬಿನೆಟ್ ಮೀಸಲಿಟ್ಟ ಅರ್ಧಕ್ಕಿಂತ ಕಡಿಮೆ ಮೊತ್ತ ನೀಡಿದೆ. ಇನ್ನು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನದ ಶೇ.0.1ರಷ್ಟು ಹಣವನ್ನು ಮಾತ್ರ ವಿತರಿಸಲಾಗಿದೆ, ಇದಲ್ಲದೆ ನಿರಂತರ ಶುಲ್ಕ ಹೆಚ್ಚಳವು ಅಂಚಿನಲ್ಲಿರುವ ಸಮುದಾಯಗಳ ವಿದ್ಯಾರ್ಥಿಗಳಿಗೆ ಶಿಕ್ಷಣವನ್ನು ಇನ್ನಷ್ಟು ದುಬಾರಿಯಾಗಿಸಿದೆ. ಇದರಿಂದ ತಳ ಸಮುದಾಯದ ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರವೇಶಿಸಲಾಗುತ್ತಿಲ್ಲ.

ಆರ್‌ಎಸ್‌ಎಸ್-ಬಿಜೆಪಿ ಸರ್ಕಾರ, ಸಾವರ್ಜನಿಕ ವಿಶ್ವವಿದ್ಯಾನಿಲಯಗಳನ್ನು ಧಮನ ಮಾಡುತ್ತಿದೆ. ಐಐಟಿಗಳಂತಹ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಶೇ.56ಪ್ರತಿಶತದಷ್ಟು ಆತ್ಮಹತ್ಯೆಗಳು ಹೆಚ್ಚಿವೆ. ಇವರೆಲ್ಲ ಅಂಚಿನಲ್ಲಿರುವ ಜಾತಿಗಳು, ತಳ ವರ್ಗಗಳು ಮತ್ತು ಬುಡಕಟ್ಟು ಸಮುದಾಯಗಳಿಗೆ ಸೇರಿದ ವಿದ್ಯಾರ್ಥಿಗಳಾಗಿದ್ದಾರೆ. ಇವರ ಕ್ರೂರ ನಡೆಯಿಂದ ರೋಹಿತ್ ವೇಮುಲನ ಸಾಂಸ್ಥಿಕ ಹತ್ಯೆಯಲ್ಲಿ ಬಿಜೆಪಿ ಸರ್ಕಾರದ ಸಂಪೂರ್ಣ ಕೈವಾಡ ಇದೆ ಎಂದು ದೇಶದ ಜನ ಗಮನಿಸಿದ್ದಾರೆ.

ಡಾ ಬಿ ಆರ್ ಅಂಬೇಡ್ಕರ್ ಅವರ ಪರಂಪರೆಯನ್ನು ಹಾಳುಮಾಡಲು ಮತ್ತು ಅನಿಷ್ಟ ಜಾತೀಯತೆಯನ್ನು ಮುಂದಿಡಲು ಮಾತ್ರ ಅಂಬೇಡ್ಕರ್ ಅವರ ಹೆಸರನ್ನು ಬಳಸಿಕೊಳ್ಳುವ ಬಿಜೆಪಿ ವಿರುದ್ಧ, SFI ಕಾಲೇಜು ಕ್ಯಾಂಪಸ್‌ಗಳಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ರೂಪಿಸುತ್ತಿದೆ. ಅಂಬೇಡ್ಕರ್ ಅವರ ಅಪ್ರತಿಮ ಪರಂಪರೆಯನ್ನು ಕಾಪಾಡುವಲ್ಲಿ ನಾವು ದೃಢಸಂಕಲ್ಪ ಹೊಂದಿದ್ದೇವೆ. ಮತ್ತು ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಆಶಯಗಳನ್ನು ನಾವು ಅಳವಡಿಸಿಕೊಂಡಿದ್ದೇವೆ. ಡಾ ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ಕೀಳು ಮಟ್ಟದಲ್ಲಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಮತ್ತು ಕೇಂದ್ರ ಗೃಹ ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಭಾರತ ವಿದ್ಯಾರ್ಥಿ ಫೆಡರೇಷನ್, ಎಸ್ ಎಫ್ ಐ ಗದಗ ಜಿಲ್ಲಾ ಸಮಿತಿ ( SFI) ಒತ್ತಾಯ ಮಾಡುತ್ತದೆ.

*ಚಂದ್ರು ರಾಠೋಡ*

ಜಿಲ್ಲಾಧ್ಯಕ್ಷರು

ಭಾರತ ವಿದ್ಯಾರ್ಥಿ ಫೆಡರೇಷನ್

Related posts

ಹಗಲು-ರಾತ್ರಿ ನಿತ್ಯ ನೂರಾರು ಟ್ರಿಪ್ ಮರಂ ಸಾಗಣೆ ಕಣ್ಣು ಮುಚ್ಚಿ ಕುಂತ ಅಧಿಕಾರಿಗಳು. ?

satyadarshana

ಬಳೂಟಗಿ ಗ್ರಾಮದಲ್ಲಿ ಆರ್ಥಿಕ ಸಾಕ್ಷರತೆ ಮತ್ತು ಡಿಜಿಟಲ್ ಬ್ಯಾಂಕಿಂಗ್ ಜಾಗೃತಿ ಕಾರ್ಯಕ್ರಮ.

satyadarshana

ವಿಧಾನ ಪರಿಷತ್ ಚುನಾವಣೆಯಲ್ಲಿʼದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆʼ ನಡುವೆ ನಾವು ಹಿಂದೆ ಬಿದ್ದಿದ್ದೇವೆ.ಎಚ್‌ಡಿಕೆ

satyadarshana

Leave a Comment